ಬೆಂಗಳೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಪ್ರಮುಖ ರಸ್ತೆಗಳು ಮತ್ತು ವೃತ್ತಗಳು ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ.
ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ಸೋಮವಾರ(ಆ.12) ಬೆಳಕು ಭವನದಲ್ಲಿ ನಡೆದ ಸಭೆಯಲ್ಲಿ, ದಸರಾ ಉತ್ಸವ ಆರಂಭಕ್ಕೆ ಒಂದು ದಿನಮೊದಲು ಅಂದರೆ ಅ. 2ರಿಂದ 21 ದಿನಗಳ ಕಲಾ ದೀಪಾಲಂಕಾರ ಮಾಡಲುನಿರ್ಧರಿಸಲಾಗಿದೆ.
ಅಲ್ಲದೆ, ವಿದ್ಯುತ್ ದೀಪಾಲಂಕಾರ ಈ ಬಾರಿಯ ದಸರಾಗೆ ಮತ್ತಷ್ಟು ಕಳೆ ಕಟ್ಟಬೇಕು. ಈ ವಿಚಾರವಾಗಿ ಸೆಸ್ಕ್ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಸಚಿವರು ನಿರ್ದೇಶಿಸಿದ್ದಾರೆ.
2024ರ ದಸರಾದಲ್ಲಿ 130 ಕಿ.ಮೀ. ರಸ್ತೆಗಳ ಉದ್ದದ್ದಕ್ಕೂ ದೀಪಗಳು ಬೆಳಗಲಿವೆ. 84 ವೃತ್ತಗಳು, ಉದ್ಯಾನವನ ಸೇರಿದಂತೆ ಪ್ರಮುಖ 64 ಸ್ಥಳಗಳಲ್ಲಿ ವಿದ್ಯುತ್ ದೀಪಗಳು ಕಂಗೊಳಿಸಲಿವೆ.
ಹಸಿರು ಚಪ್ಪರ, ಸುಸ್ವಾತಗ, ವಿವಿಧ ಕಮಾನುಗಳು, ನಿಗಮದ ಕಚೇರಿಗಳ ದೀಪಾಲಂಕಾರ, ಛಾಯಾಗ್ರಹಣ ಮತ್ತು ಸಮಾರಂಭಗಳ ವೇದಿಕೆ ಮತ್ತಿತರೆಡೆ ವಿದ್ಯುತ್ ದೀಪಾಲಾಂಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…