ಬೆಂಗಳೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರಿನ ಪ್ರಮುಖ ರಸ್ತೆಗಳು ಮತ್ತು ವೃತ್ತಗಳು ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ.
ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ನೇತೃತ್ವದಲ್ಲಿ ಸೋಮವಾರ(ಆ.12) ಬೆಳಕು ಭವನದಲ್ಲಿ ನಡೆದ ಸಭೆಯಲ್ಲಿ, ದಸರಾ ಉತ್ಸವ ಆರಂಭಕ್ಕೆ ಒಂದು ದಿನಮೊದಲು ಅಂದರೆ ಅ. 2ರಿಂದ 21 ದಿನಗಳ ಕಲಾ ದೀಪಾಲಂಕಾರ ಮಾಡಲುನಿರ್ಧರಿಸಲಾಗಿದೆ.
ಅಲ್ಲದೆ, ವಿದ್ಯುತ್ ದೀಪಾಲಂಕಾರ ಈ ಬಾರಿಯ ದಸರಾಗೆ ಮತ್ತಷ್ಟು ಕಳೆ ಕಟ್ಟಬೇಕು. ಈ ವಿಚಾರವಾಗಿ ಸೆಸ್ಕ್ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ಸಚಿವರು ನಿರ್ದೇಶಿಸಿದ್ದಾರೆ.
2024ರ ದಸರಾದಲ್ಲಿ 130 ಕಿ.ಮೀ. ರಸ್ತೆಗಳ ಉದ್ದದ್ದಕ್ಕೂ ದೀಪಗಳು ಬೆಳಗಲಿವೆ. 84 ವೃತ್ತಗಳು, ಉದ್ಯಾನವನ ಸೇರಿದಂತೆ ಪ್ರಮುಖ 64 ಸ್ಥಳಗಳಲ್ಲಿ ವಿದ್ಯುತ್ ದೀಪಗಳು ಕಂಗೊಳಿಸಲಿವೆ.
ಹಸಿರು ಚಪ್ಪರ, ಸುಸ್ವಾತಗ, ವಿವಿಧ ಕಮಾನುಗಳು, ನಿಗಮದ ಕಚೇರಿಗಳ ದೀಪಾಲಂಕಾರ, ಛಾಯಾಗ್ರಹಣ ಮತ್ತು ಸಮಾರಂಭಗಳ ವೇದಿಕೆ ಮತ್ತಿತರೆಡೆ ವಿದ್ಯುತ್ ದೀಪಾಲಾಂಕಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ.ಶೀಲಾ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…