ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕಾಗಿ ದಿನಗಣನೆ ಆರಂಭವಾಗಿದ್ದು, ದಸರಾ ಗಜಪಡೆ ಇಂದು ಮೈಸೂರಿಗೆ ಆಗಮಿಸುತ್ತಿದೆ. ಇದಕ್ಕಾಗಿ, ಅರಣ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದ್ದು, ಗಜಪಡೆ, ಸಿಬ್ಬಂದಿ ಮತ್ತು ಸಾರ್ವಜನಿಕ ಆಸ್ತಿಯ ವಿಮೆ ಮಾಡಲು ನಿರ್ಧಾರ ಮಾಡಿದೆ.
87,50,000 ರೂಪಾಯಿಯ ವಿಮೆ ಗಜಪಡೆಗೆ ನೀಡಲಾಗಿದೆ. 1 ಕೋಟಿ ರೂಪಾಯಿ ಮೊತ್ತದ ವಿಮೆ ಅರಣ್ಯ ಇಲಾಖೆ ಸಿಬ್ಬಂದಿಗೆ, ಮತ್ತು 50 ಲಕ್ಷ ರೂಪಾಯಿ ವಿಮೆ ಸಾರ್ವಜನಿಕರಿಗೆ ಮತ್ತು ಅವರ ಆಸ್ತಿಯಲ್ಲಿಯೂ ನೀಡಲಾಗಿದೆ. ಈ ವಿಮೆ, ಆಗಸ್ಟ್ 21ರಿಂದ ಆರಂಭವಾಗಿ ದಸರಾ ಮುಕ್ತಾಯವರೆಗೆ ಹಾಗೂ ಗಜಪಡೆ ಕಾಡು ಸೇರುವವರೆಗೆ ಮಾನ್ಯವಾಗಿರುತ್ತದೆ. 18 ಆನೆಗಳಿಗೆ 87,50,000 ರೂಪಾಯಿ ವಿಮೆ ನೀಡಲಾಗಿದೆ, ಮತ್ತು 50 ಜನರಿಗೆ ತಲಾ 2 ಲಕ್ಷದ ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಒಟ್ಟು 2,37,50,000 ರೂಪಾಯಿ ವಿಮೆ ಅರಣ್ಯ ಇಲಾಖೆಯು ಮಾಡಿದೆ.
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…