ಮೈಸೂರು

ಮೈಸೂರು ದಸರಾ | ಸೆ.22ರಿಂದ ಪುಸ್ತಕ ಮೇಳ; ನೋಂದಣಿಗೆ ಅವಕಾಶ

ಮೈಸೂರು : ಮೈಸೂರು ದಸರಾ ಉತ್ಸವದ ಅಂಗವಾಗಿ ಸೆ.22ರಿಂದ ಅ.1ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ.

ಈ ಪುಸ್ತಕ ಮೇಳದಲ್ಲಿ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಸಂಕಿರಣ ಸೇರಿದಂತೆ ಅನೇಕ ಸಾಹಿತ್ಯಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಲೇಖಕರು ಹಾಗೂ ಪ್ರಕಾಶಕರು ತಮ್ಮ ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲು ಬಯಸಿದಲ್ಲಿ ಪುಸ್ತಕ ಬಿಡುಗಡೆ ಮಾಡಲು ಸಹ ಉದ್ದೇಶಿಸಲಾಗಿದೆ. ನಾಡಿನ ಖ್ಯಾತ ಸಾಹಿತಿಗಳು ಪುಸ್ತಕ ಮೇಳದಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಮೇಳದಲ್ಲಿ ಹೊಸ ಪುಸ್ತಕ ಬಿಡುಗಡೆ ಮಾಡಲು ಮೊದಲು ನೋಂದಾಯಿಸಿಕೊಳ್ಳಬಹುದಾಗಿದೆ.

ಪುಸ್ತಕ ಬಿಡುಗಡೆ ಮಾಡಲು ಬಯಸುವ ಪುಸ್ತಕದ ಎರಡು ಪ್ರತಿಗಳೊಂದಿಗೆ ನಿಗದಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಈ ಪುಸ್ತಕಗಳು ಯಾವುದೇ ವಿವಾದಾತ್ಮಕ ಅಂಶಗಳನ್ನು ಹೊಂದಿರಬಾರದು. ಒಂದು ವೇಳೆ ಪುಸ್ತಕ ಸಂಬಂಧ ಯಾವುದೇ ಕಾನೂನು ತೊಡಕುಗಳು ಉಂಟಾದಲ್ಲಿ ಅದಕ್ಕೆ ಲೇಖಕರು ಹಾಗೂ ಪ್ರಕಾಶಕರೇ ಜವಾಬ್ದಾರರಾಗಿರುತ್ತಾರೆ.

ಬಿಡುಗಡೆಗೆ ಪುಸ್ತಕಗಳನ್ನು ಆಯ್ಕೆ ಮಾಡುವ ಅಥವಾ ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಪ್ರಾಧಿಕಾರ ಹೊಂದಿರುತ್ತದೆ. ಸೆ.16ರ ನಂತರ ಯಾವುದೇ ಪುಸ್ತಕಗಳನ್ನು ಬಿಡುಗಡೆಗೆ ಸ್ವೀಕರಿಸುವುದಿಲ್ಲ. ಪುಸ್ತಕ ಬಿಡುಗಡೆಗೆ ಬರುವ ಲೇಖಕರು ಮತ್ತು ಪ್ರಕಾಶಕರುಗಳಿಗೆ ಯಾವುದೇ ಸಂಭಾವನೆ, ಪ್ರಯಾಣ ವೆಚ್ಚ ಸೇರಿದಂತೆ ಇತರೆ ಯಾವುದೇ ಸೌಲಭ್ಯ ಒದಗಿಸಲು ಅವಕಾಶವಿರುವುದಿಲ್ಲ. ಬಿಡುಗಡೆಗೆ ಸ್ವೀಕೃತವಾಗುವ ಪುಸ್ತಕಗಳನ್ನು ಸಂಖ್ಯೆಗೆ ಅನುಗುಣವಾಗಿ ಪುಸ್ತಕ ಮೇಳ ನಡೆಯುವ 9 ದಿನಗಳಿಗೆ ವಿಂಗಡಿಸಿ ಯಾವ ದಿನ ಯಾವ ಲೇಖಕರ ಪುಸ್ತಕಗಳನ್ನು ಬಿಡುಗಡೆ ಮಾಡಲಾಗುವುದೆಂಬ ವಿವರವನ್ನು ಆಯಾ ಲೇಖಕರು, ಪ್ರಕಾಶಕರಿಗೆ ತಿಳಿಸಲಾಗುವುದು. ಪುಸ್ತಕ ಬಿಡುಗಡೆಗೆ ಬಯಸುವ ಲೇಖಕರು ತಮ್ಮ ವಿವರಗಳನ್ನು ಅಧ್ಯಕ್ಷರು, ಕನ್ನಡ ಪುಸ್ತಕ ಪ್ರಾಽಕಾರ, ಬೆಂಗಳೂರು ಅಥವಾ ಮೊ.ಸಂ : 9448056562ಗೆ ಕಳುಹಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

11 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

11 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

12 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

13 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

13 hours ago