ಮೈಸೂರು

ಮೈಸೂರು ದಸರಾ | ಸೆ.22ರಿಂದ ಪುಸ್ತಕ ಮೇಳ; ನೋಂದಣಿಗೆ ಅವಕಾಶ

ಮೈಸೂರು : ಮೈಸೂರು ದಸರಾ ಉತ್ಸವದ ಅಂಗವಾಗಿ ಸೆ.22ರಿಂದ ಅ.1ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ.

ಈ ಪುಸ್ತಕ ಮೇಳದಲ್ಲಿ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಸಂಕಿರಣ ಸೇರಿದಂತೆ ಅನೇಕ ಸಾಹಿತ್ಯಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಲೇಖಕರು ಹಾಗೂ ಪ್ರಕಾಶಕರು ತಮ್ಮ ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲು ಬಯಸಿದಲ್ಲಿ ಪುಸ್ತಕ ಬಿಡುಗಡೆ ಮಾಡಲು ಸಹ ಉದ್ದೇಶಿಸಲಾಗಿದೆ. ನಾಡಿನ ಖ್ಯಾತ ಸಾಹಿತಿಗಳು ಪುಸ್ತಕ ಮೇಳದಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಮೇಳದಲ್ಲಿ ಹೊಸ ಪುಸ್ತಕ ಬಿಡುಗಡೆ ಮಾಡಲು ಮೊದಲು ನೋಂದಾಯಿಸಿಕೊಳ್ಳಬಹುದಾಗಿದೆ.

ಪುಸ್ತಕ ಬಿಡುಗಡೆ ಮಾಡಲು ಬಯಸುವ ಪುಸ್ತಕದ ಎರಡು ಪ್ರತಿಗಳೊಂದಿಗೆ ನಿಗದಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಈ ಪುಸ್ತಕಗಳು ಯಾವುದೇ ವಿವಾದಾತ್ಮಕ ಅಂಶಗಳನ್ನು ಹೊಂದಿರಬಾರದು. ಒಂದು ವೇಳೆ ಪುಸ್ತಕ ಸಂಬಂಧ ಯಾವುದೇ ಕಾನೂನು ತೊಡಕುಗಳು ಉಂಟಾದಲ್ಲಿ ಅದಕ್ಕೆ ಲೇಖಕರು ಹಾಗೂ ಪ್ರಕಾಶಕರೇ ಜವಾಬ್ದಾರರಾಗಿರುತ್ತಾರೆ.

ಬಿಡುಗಡೆಗೆ ಪುಸ್ತಕಗಳನ್ನು ಆಯ್ಕೆ ಮಾಡುವ ಅಥವಾ ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಪ್ರಾಧಿಕಾರ ಹೊಂದಿರುತ್ತದೆ. ಸೆ.16ರ ನಂತರ ಯಾವುದೇ ಪುಸ್ತಕಗಳನ್ನು ಬಿಡುಗಡೆಗೆ ಸ್ವೀಕರಿಸುವುದಿಲ್ಲ. ಪುಸ್ತಕ ಬಿಡುಗಡೆಗೆ ಬರುವ ಲೇಖಕರು ಮತ್ತು ಪ್ರಕಾಶಕರುಗಳಿಗೆ ಯಾವುದೇ ಸಂಭಾವನೆ, ಪ್ರಯಾಣ ವೆಚ್ಚ ಸೇರಿದಂತೆ ಇತರೆ ಯಾವುದೇ ಸೌಲಭ್ಯ ಒದಗಿಸಲು ಅವಕಾಶವಿರುವುದಿಲ್ಲ. ಬಿಡುಗಡೆಗೆ ಸ್ವೀಕೃತವಾಗುವ ಪುಸ್ತಕಗಳನ್ನು ಸಂಖ್ಯೆಗೆ ಅನುಗುಣವಾಗಿ ಪುಸ್ತಕ ಮೇಳ ನಡೆಯುವ 9 ದಿನಗಳಿಗೆ ವಿಂಗಡಿಸಿ ಯಾವ ದಿನ ಯಾವ ಲೇಖಕರ ಪುಸ್ತಕಗಳನ್ನು ಬಿಡುಗಡೆ ಮಾಡಲಾಗುವುದೆಂಬ ವಿವರವನ್ನು ಆಯಾ ಲೇಖಕರು, ಪ್ರಕಾಶಕರಿಗೆ ತಿಳಿಸಲಾಗುವುದು. ಪುಸ್ತಕ ಬಿಡುಗಡೆಗೆ ಬಯಸುವ ಲೇಖಕರು ತಮ್ಮ ವಿವರಗಳನ್ನು ಅಧ್ಯಕ್ಷರು, ಕನ್ನಡ ಪುಸ್ತಕ ಪ್ರಾಽಕಾರ, ಬೆಂಗಳೂರು ಅಥವಾ ಮೊ.ಸಂ : 9448056562ಗೆ ಕಳುಹಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

19 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago