ಮೈಸೂರು

ಮೈಸೂರು ದಸರಾ | ಸೆ.22ರಿಂದ ಪುಸ್ತಕ ಮೇಳ; ನೋಂದಣಿಗೆ ಅವಕಾಶ

ಮೈಸೂರು : ಮೈಸೂರು ದಸರಾ ಉತ್ಸವದ ಅಂಗವಾಗಿ ಸೆ.22ರಿಂದ ಅ.1ರವರೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ದಸರಾ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ.

ಈ ಪುಸ್ತಕ ಮೇಳದಲ್ಲಿ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಸಂಕಿರಣ ಸೇರಿದಂತೆ ಅನೇಕ ಸಾಹಿತ್ಯಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಲೇಖಕರು ಹಾಗೂ ಪ್ರಕಾಶಕರು ತಮ್ಮ ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲು ಬಯಸಿದಲ್ಲಿ ಪುಸ್ತಕ ಬಿಡುಗಡೆ ಮಾಡಲು ಸಹ ಉದ್ದೇಶಿಸಲಾಗಿದೆ. ನಾಡಿನ ಖ್ಯಾತ ಸಾಹಿತಿಗಳು ಪುಸ್ತಕ ಮೇಳದಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಮೇಳದಲ್ಲಿ ಹೊಸ ಪುಸ್ತಕ ಬಿಡುಗಡೆ ಮಾಡಲು ಮೊದಲು ನೋಂದಾಯಿಸಿಕೊಳ್ಳಬಹುದಾಗಿದೆ.

ಪುಸ್ತಕ ಬಿಡುಗಡೆ ಮಾಡಲು ಬಯಸುವ ಪುಸ್ತಕದ ಎರಡು ಪ್ರತಿಗಳೊಂದಿಗೆ ನಿಗದಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಈ ಪುಸ್ತಕಗಳು ಯಾವುದೇ ವಿವಾದಾತ್ಮಕ ಅಂಶಗಳನ್ನು ಹೊಂದಿರಬಾರದು. ಒಂದು ವೇಳೆ ಪುಸ್ತಕ ಸಂಬಂಧ ಯಾವುದೇ ಕಾನೂನು ತೊಡಕುಗಳು ಉಂಟಾದಲ್ಲಿ ಅದಕ್ಕೆ ಲೇಖಕರು ಹಾಗೂ ಪ್ರಕಾಶಕರೇ ಜವಾಬ್ದಾರರಾಗಿರುತ್ತಾರೆ.

ಬಿಡುಗಡೆಗೆ ಪುಸ್ತಕಗಳನ್ನು ಆಯ್ಕೆ ಮಾಡುವ ಅಥವಾ ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಪ್ರಾಧಿಕಾರ ಹೊಂದಿರುತ್ತದೆ. ಸೆ.16ರ ನಂತರ ಯಾವುದೇ ಪುಸ್ತಕಗಳನ್ನು ಬಿಡುಗಡೆಗೆ ಸ್ವೀಕರಿಸುವುದಿಲ್ಲ. ಪುಸ್ತಕ ಬಿಡುಗಡೆಗೆ ಬರುವ ಲೇಖಕರು ಮತ್ತು ಪ್ರಕಾಶಕರುಗಳಿಗೆ ಯಾವುದೇ ಸಂಭಾವನೆ, ಪ್ರಯಾಣ ವೆಚ್ಚ ಸೇರಿದಂತೆ ಇತರೆ ಯಾವುದೇ ಸೌಲಭ್ಯ ಒದಗಿಸಲು ಅವಕಾಶವಿರುವುದಿಲ್ಲ. ಬಿಡುಗಡೆಗೆ ಸ್ವೀಕೃತವಾಗುವ ಪುಸ್ತಕಗಳನ್ನು ಸಂಖ್ಯೆಗೆ ಅನುಗುಣವಾಗಿ ಪುಸ್ತಕ ಮೇಳ ನಡೆಯುವ 9 ದಿನಗಳಿಗೆ ವಿಂಗಡಿಸಿ ಯಾವ ದಿನ ಯಾವ ಲೇಖಕರ ಪುಸ್ತಕಗಳನ್ನು ಬಿಡುಗಡೆ ಮಾಡಲಾಗುವುದೆಂಬ ವಿವರವನ್ನು ಆಯಾ ಲೇಖಕರು, ಪ್ರಕಾಶಕರಿಗೆ ತಿಳಿಸಲಾಗುವುದು. ಪುಸ್ತಕ ಬಿಡುಗಡೆಗೆ ಬಯಸುವ ಲೇಖಕರು ತಮ್ಮ ವಿವರಗಳನ್ನು ಅಧ್ಯಕ್ಷರು, ಕನ್ನಡ ಪುಸ್ತಕ ಪ್ರಾಽಕಾರ, ಬೆಂಗಳೂರು ಅಥವಾ ಮೊ.ಸಂ : 9448056562ಗೆ ಕಳುಹಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

2 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

2 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

2 hours ago

ಮಳೆ ಅನಾಹುತ ಎದುರಿಸಲು ಮೈಸೂರು ನಗರಪಾಲಿಕೆ ಸಿದ್ಧತೆ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…

2 hours ago

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

11 hours ago