ಮೈಸೂರು

ರಿಲ್ಯಾಕ್ಸ್ ಮೂಡ್‌ನಲ್ಲಿ ಅಭಿಮನ್ಯು ಮತ್ತು ತಂಡ

ಮೈಸೂರುವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ನೆರವೇರಿದೆ. ದಸರಾ ಮುಗಿದ ಬೆನ್ನಲ್ಲೇ ಅರಮನೆ ಆವರಣ ಬಿಕೋ ಎನ್ನುತ್ತಿದೆ. ಅಂಬಾವಿಲಾಸ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದು, ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಬಂದಿದ್ದವರು ಎಸೆದಿದ್ದ ತ್ಯಾಜ್ಯವನ್ನು ಸಿಬ್ಬಂದಿ ತೆರವುಗೊಳಿಸುವುದರಲ್ಲಿ ನಿರತರಾಗಿದ್ದಾರೆ.

ನಾಳೆ ತನ್ನ ಸ್ವಂತ ಜಾಗಕ್ಕೆ  ಹೋಗುವ ದಸರಾ ಗಜಪಡೆ ಕಳೆದ 2 ತಿಂಗಳಿಂದ ಮೈಸೂರಿನಲ್ಲಿದ್ದು ದಸರಾ ಆನೆಗಳು ನಾಳೆ ತನ್ನ ಜಾಗಕ್ಕೆ ಮರಳಲಿದೆ. ಇದೇ ಮೊದಲ ಬಾರಿ ವಿದ್ಯುತ್ ದೀಪಗಳ ಬೆಳಕಿನ ಅಲಂಕಾರದ ನಡುವೆ ಜಂಬೂಸವಾರಿ ಸಾಗಿದ್ದು ಸಾಕಷ್ಟು ಯಶಸ್ಸುಗಳಿಸಿದೆ. ಶುಕ್ರವಾರ ತನ್ನ  ಶಿಬಿರಗಳತ್ತ ಕ್ಯಾಪ್ಟನ್ ಅಭಿಮನ್ಯು ಮತ್ತು ತಂಡ ಪ್ರಯಾಣ ಬೆಳಸಲಿದೆ.

 ಅರಮನೆ ಆವರಣದಲ್ಲಿ ದಸರಾ  ಆನೆಗಳಿಗೆ ನಾಳೆ ವಿಶೇಷ ಪೂಜೆ ನೆರವೇರಿಸಲಾಗುವುದು. ನಂತರ  ಮೈಸೂರು ಅರಮನೆ ಆಡಳಿತ ಮಂಡಳಿ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಬೀಳ್ಕೊಡುಗೆ ನೀಡಲಾಗುತ್ತದೆ.

ದಸರಾ ಗಜಪಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಬೂಸವಾರಿ ಯಶಸ್ವಿಯಾಗಿ ನಡೆದಿದ್ದು, ದಸರಾ ಗಜಪಡೆಯ ನಾಯಕ ಅಭಿಮನ್ಯು ಎಲ್ಲರ ಮನಗೆದ್ದಿದ್ದಾನೆ. 750 ಕೆ.ಜಿ.ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಜಂಬೂಸವಾರಿ ನಡೆಸಿಕೊಟ್ಟು ಕ್ಯಾಪ್ಟನ್ ಅಭಿಮನ್ಯು ಶಬಾಷ್‌ ಗಿರಿ ಪಡೆದಿದ್ದಾನೆ..

ವಿಶೇಷವಾಗಿ ಅರಮನೆ ಆವರಣದಲ್ಲಿರುವ ಅಭಿಮನ್ಯು ನೋಡಲು ಜನರು ಮುಗಿಬಿದ್ದಿದ್ದಾರೆ. ಜೊತೆಗೆ ಸಾರ್ವಜನಿಕರು ಅಭಿಮನ್ಯು ಬಳಿ ನಿಂತು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸುತ್ತಿದ್ದಾರೆ

 

andolana

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

3 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago