ಮೈಸೂರು

ರಿಲ್ಯಾಕ್ಸ್ ಮೂಡ್‌ನಲ್ಲಿ ಅಭಿಮನ್ಯು ಮತ್ತು ತಂಡ

ಮೈಸೂರುವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಯಶಸ್ವಿಯಾಗಿ ನೆರವೇರಿದೆ. ದಸರಾ ಮುಗಿದ ಬೆನ್ನಲ್ಲೇ ಅರಮನೆ ಆವರಣ ಬಿಕೋ ಎನ್ನುತ್ತಿದೆ. ಅಂಬಾವಿಲಾಸ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದು, ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಬಂದಿದ್ದವರು ಎಸೆದಿದ್ದ ತ್ಯಾಜ್ಯವನ್ನು ಸಿಬ್ಬಂದಿ ತೆರವುಗೊಳಿಸುವುದರಲ್ಲಿ ನಿರತರಾಗಿದ್ದಾರೆ.

ನಾಳೆ ತನ್ನ ಸ್ವಂತ ಜಾಗಕ್ಕೆ  ಹೋಗುವ ದಸರಾ ಗಜಪಡೆ ಕಳೆದ 2 ತಿಂಗಳಿಂದ ಮೈಸೂರಿನಲ್ಲಿದ್ದು ದಸರಾ ಆನೆಗಳು ನಾಳೆ ತನ್ನ ಜಾಗಕ್ಕೆ ಮರಳಲಿದೆ. ಇದೇ ಮೊದಲ ಬಾರಿ ವಿದ್ಯುತ್ ದೀಪಗಳ ಬೆಳಕಿನ ಅಲಂಕಾರದ ನಡುವೆ ಜಂಬೂಸವಾರಿ ಸಾಗಿದ್ದು ಸಾಕಷ್ಟು ಯಶಸ್ಸುಗಳಿಸಿದೆ. ಶುಕ್ರವಾರ ತನ್ನ  ಶಿಬಿರಗಳತ್ತ ಕ್ಯಾಪ್ಟನ್ ಅಭಿಮನ್ಯು ಮತ್ತು ತಂಡ ಪ್ರಯಾಣ ಬೆಳಸಲಿದೆ.

 ಅರಮನೆ ಆವರಣದಲ್ಲಿ ದಸರಾ  ಆನೆಗಳಿಗೆ ನಾಳೆ ವಿಶೇಷ ಪೂಜೆ ನೆರವೇರಿಸಲಾಗುವುದು. ನಂತರ  ಮೈಸೂರು ಅರಮನೆ ಆಡಳಿತ ಮಂಡಳಿ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಬೀಳ್ಕೊಡುಗೆ ನೀಡಲಾಗುತ್ತದೆ.

ದಸರಾ ಗಜಪಡೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಬೂಸವಾರಿ ಯಶಸ್ವಿಯಾಗಿ ನಡೆದಿದ್ದು, ದಸರಾ ಗಜಪಡೆಯ ನಾಯಕ ಅಭಿಮನ್ಯು ಎಲ್ಲರ ಮನಗೆದ್ದಿದ್ದಾನೆ. 750 ಕೆ.ಜಿ.ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಜಂಬೂಸವಾರಿ ನಡೆಸಿಕೊಟ್ಟು ಕ್ಯಾಪ್ಟನ್ ಅಭಿಮನ್ಯು ಶಬಾಷ್‌ ಗಿರಿ ಪಡೆದಿದ್ದಾನೆ..

ವಿಶೇಷವಾಗಿ ಅರಮನೆ ಆವರಣದಲ್ಲಿರುವ ಅಭಿಮನ್ಯು ನೋಡಲು ಜನರು ಮುಗಿಬಿದ್ದಿದ್ದಾರೆ. ಜೊತೆಗೆ ಸಾರ್ವಜನಿಕರು ಅಭಿಮನ್ಯು ಬಳಿ ನಿಂತು ಸೆಲ್ಫಿ ತೆಗೆದುಕೊಂಡು ಸಂಭ್ರಮಿಸುತ್ತಿದ್ದಾರೆ

 

andolana

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

18 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

18 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

18 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

18 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

18 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

18 hours ago