ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಮುಖವಾದ ಆಕರ್ಷಣೆ ಅಂದರೆ ಅದು ದಸರಾ ಗಜಪಡೆ. ಜಂಬೂಸವಾರಿ ಮೆರವಣಿಗೆಯಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು.
ಅಕ್ಟೋಬರ್ ೧೨ ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, ಈಗಾಗಲೇ ೨೦೨೪ ರ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ದಸರಾ ಗಜಪಡೆಗಳ ಶಾರ್ಟ್ ಲಿಸ್ಟ್ ರೆಡಿಯಾಗಿದೆ.
ಈ ಬಾರಿ ೧೪ ಆನೆಗಳು, ಹೆಚ್ಚುವರಿ ನಾಲ್ಕು ಆನೆ ಸೇರಿದಂತೆ ೧೮ ಆನೆಗಳನ್ನು ಅಂತಿಮಗೊಳಿಸಲು ಉದ್ದೇಶಿಸಲಾಗಿದೆ. ಈ ಆನೆಗಳು ಆಗಸ್ಟ್ ೯ ಅಥವಾ ೧೧ ರಂದು ಮೈಸೂರಿಗೆ ಆಗಮಿಸಲಿವೆ. ಮೊದಲ ತಂಡದಲ್ಲಿ ೯ ಆನೆಗಳು ಬರಲಿವೆ.
ಇನ್ನು ರಾಜ್ಯದಾದ್ಯಂತ ಉತ್ತಮವಾದ ಮಳೆಯಾಗಿರುವ ಕಾರಣ ಈ ಬಾರಿ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲು ಚಿಂತನೆ ನಡೆಸಲಾಗಿದ್ದು, ಈ ಹಿನ್ನೆಲೆಯಲ್ಲಿ ಆನೆಗಳಿಗೆ ಹೆಚ್ಚಿನ ತರಬೇತಿ ನೀಡುವುದಕ್ಕಾಗಿ ೬೦ ದಿನ ಮುಂಚಿತವಾಗಿ ಆನೆಗಳನ್ನ ಮೈಸೂರಿಗೆ ಕರೆದುಕೊಂಡು ಬರಲು ಉದ್ದೇಶಿಸಲಾಗಿದೆ.
ಈಗಾಗಲೇ ನಾಗರಹೊಳೆ ಅರಣ್ಯ ವ್ಯಾಪ್ತಿಯ ಮತ್ತಿಗೋಡು, ಭೀಮನಕಟ್ಟೆ, ದೊಡ್ಡಹರವೆ, ಕೊಡಗಿನ ದುಬಾರೆ, ಬಂಡೀಪುರದ ರಾಂಪುರ ಕ್ಯಾಂಪ್ ಗೆ ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್ ಬಿಎಂ ಶರಣಬಸಪ್ಪ ನೇತೃತ್ವದ ಅಧಿಕಾರಿಗಳ ತಂಡ ತೆರಳಿ ಒಟ್ಟು ೨೨ ಆನೆಗಳನ್ನ ಪರಿಶೀಲನೆ ಮಾಡಿದ್ದಾರೆ. ಅವುಗಳಲ್ಲಿ ೧೮ ಆನೆಗಳ ಪಟ್ಟಿ ಸಿದ್ದಪಡಿಸಿ ೧೪ಆನೆ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿವೆ. ಉಳಿದ ೪ ಆನೆಗಳನ್ನ ಕಾಯ್ದಿರಿಸಲಾಗಿದೆ.
ಆಯ್ಕೆಯಾಗಿರುವ ೧೪ ಆನೆಗಳಲ್ಲಿ ಮೊದಲ ತಂಡದಲ್ಲಿ ೯ ಆನೆಗಳನ್ನ ಗಜಪಯಣದ ಮೂಲಕ ಮೈಸೂರಿಗೆ ಕರೆತರಲಾಗುತ್ತಿದೆ. ಮೊದಲ ತಂಡದಲ್ಲಿ ಮತ್ತಿಗೋಡು ಕ್ಯಾಂಪ್ ನಿಂದ ಗಜಪಡೆ ನಾಯಕ ಅಭಿಮನ್ಯು, ಭೀಮ, ಹೊಸ ಆನೆ ಏಕಲವ್ಯ, ಭೀಮನಕಟ್ಟೆ ಕ್ಯಾಂಪ್ ನಿಂದ ವರಲಕ್ಷ್ಮೀ, ದುಬಾರೆ ಕ್ಯಾಂಪ್ ನಿಂದ ಧನಂಜಯ, ಗೋಪಿ, ಕಂಜನ್, ರಾಂಪುರ ಕ್ಯಾಂಪ್ ನಿಂದ ರೋಹಿತ, ಲಕ್ಷ್ಮೀ ಆನೆಗಳು ಮೈಸೂರಿಗೆ ಎಂಟ್ರಿ ಕೊಡಲಿವೆ.
ಇನ್ನು ಎರಡನೇ ತಂಡದಲ್ಲಿ ದುಬಾರೆ ಕ್ಯಾಂಪ್ ನಿಂದ ಪ್ರಶಾಂತ್, ಸುಗ್ರೀವ, ಮತ್ತಿಗೋಡು ಕ್ಯಾಂಪ್ ನಿಂದ ಮಹೇಂದ್ರ, ದೊಡ್ಡಹರವೆಯಿಂದ ಲಕ್ಷ್ಮೀ, ರಾಂಪುರ ಕ್ಯಾಂಪ್ ನಿಂದ ಹಿರಣ್ಯ ಆನೆಗಳನ್ನ ಮೈಸೂರಿಗೆ ಕರೆದುಕೊಂಡು ಬರಲಾಗುತ್ತದೆ.
ದುಬಾರ್ ಕ್ಯಾಂಪ್ ನಿಂದ ಅನುಭವಿ ಪ್ರಶಾಂತ್, ಅಯ್ಯಪ್ಪ, ರಾಮಾಪುರ ಕ್ಯಾಂಪ್ ನಿಂದ ಪಾರ್ಥಸಾರಥಿ, ಹಾಗೂ ಮಾಲಾದೇವಿ ಆನೆಗಳನ್ನ ಆಯ್ಕೆ ಮಾಡಿ ಕಾಯ್ದಿರಿಸಲಾಗಿದೆ.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…
ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…