ಮೈಸೂರು

ಮೈಸೂರು ದಸರಾ ಗಜಪಡೆಗಳ ಶಾರ್ಟ್ ಲಿಸ್ಟ್ ರೆಡಿ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಮುಖವಾದ ಆಕರ್ಷಣೆ ಅಂದರೆ ಅದು ದಸರಾ ಗಜಪಡೆ. ಜಂಬೂಸವಾರಿ ಮೆರವಣಿಗೆಯಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು.

ಅಕ್ಟೋಬರ್‌ ೧೨ ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, ಈಗಾಗಲೇ ೨೦೨೪ ರ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ದಸರಾ ಗಜಪಡೆಗಳ ಶಾರ್ಟ್‌ ಲಿಸ್ಟ್‌ ರೆಡಿಯಾಗಿದೆ.

ಈ ಬಾರಿ ೧೪ ಆನೆಗಳು, ಹೆಚ್ಚುವರಿ ನಾಲ್ಕು ಆನೆ ಸೇರಿದಂತೆ ೧೮ ಆನೆಗಳನ್ನು ಅಂತಿಮಗೊಳಿಸಲು ಉದ್ದೇಶಿಸಲಾಗಿದೆ. ಈ ಆನೆಗಳು ಆಗಸ್ಟ್‌ ೯ ಅಥವಾ ೧೧ ರಂದು ಮೈಸೂರಿಗೆ ಆಗಮಿಸಲಿವೆ. ಮೊದಲ ತಂಡದಲ್ಲಿ ೯ ಆನೆಗಳು ಬರಲಿವೆ.

ಇನ್ನು ರಾಜ್ಯದಾದ್ಯಂತ ಉತ್ತಮವಾದ ಮಳೆಯಾಗಿರುವ ಕಾರಣ ಈ ಬಾರಿ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲು ಚಿಂತನೆ ನಡೆಸಲಾಗಿದ್ದು, ಈ ಹಿನ್ನೆಲೆಯಲ್ಲಿ ಆನೆಗಳಿಗೆ ಹೆಚ್ಚಿನ ತರಬೇತಿ ನೀಡುವುದಕ್ಕಾಗಿ ೬೦ ದಿನ ಮುಂಚಿತವಾಗಿ ಆನೆಗಳನ್ನ ಮೈಸೂರಿಗೆ ಕರೆದುಕೊಂಡು ಬರಲು ಉದ್ದೇಶಿಸಲಾಗಿದೆ.

ಈಗಾಗಲೇ ನಾಗರಹೊಳೆ  ಅರಣ್ಯ ವ್ಯಾಪ್ತಿಯ ಮತ್ತಿಗೋಡು, ಭೀಮನಕಟ್ಟೆ, ದೊಡ್ಡಹರವೆ, ಕೊಡಗಿನ ದುಬಾರೆ, ಬಂಡೀಪುರದ ರಾಂಪುರ ಕ್ಯಾಂಪ್‌ ಗೆ ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್‌ ಬಿಎಂ ಶರಣಬಸಪ್ಪ ನೇತೃತ್ವದ ಅಧಿಕಾರಿಗಳ ತಂಡ ತೆರಳಿ ಒಟ್ಟು ೨೨ ಆನೆಗಳನ್ನ ಪರಿಶೀಲನೆ ಮಾಡಿದ್ದಾರೆ. ಅವುಗಳಲ್ಲಿ ೧೮ ಆನೆಗಳ ಪಟ್ಟಿ ಸಿದ್ದಪಡಿಸಿ ೧೪ಆನೆ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿವೆ. ಉಳಿದ ೪ ಆನೆಗಳನ್ನ ಕಾಯ್ದಿರಿಸಲಾಗಿದೆ.

ಆಯ್ಕೆಯಾಗಿರುವ ೧೪ ಆನೆಗಳಲ್ಲಿ ಮೊದಲ ತಂಡದಲ್ಲಿ ೯ ಆನೆಗಳನ್ನ ಗಜಪಯಣದ ಮೂಲಕ ಮೈಸೂರಿಗೆ ಕರೆತರಲಾಗುತ್ತಿದೆ. ಮೊದಲ ತಂಡದಲ್ಲಿ ಮತ್ತಿಗೋಡು ಕ್ಯಾಂಪ್‌ ನಿಂದ ಗಜಪಡೆ ನಾಯಕ ಅಭಿಮನ್ಯು, ಭೀಮ, ಹೊಸ ಆನೆ ಏಕಲವ್ಯ, ಭೀಮನಕಟ್ಟೆ ಕ್ಯಾಂಪ್‌ ನಿಂದ ವರಲಕ್ಷ್ಮೀ, ದುಬಾರೆ ಕ್ಯಾಂಪ್‌ ನಿಂದ ಧನಂಜಯ, ಗೋಪಿ, ಕಂಜನ್‌, ರಾಂಪುರ ಕ್ಯಾಂಪ್‌ ನಿಂದ ರೋಹಿತ, ಲಕ್ಷ್ಮೀ  ಆನೆಗಳು ಮೈಸೂರಿಗೆ ಎಂಟ್ರಿ ಕೊಡಲಿವೆ.

ಇನ್ನು ಎರಡನೇ ತಂಡದಲ್ಲಿ ದುಬಾರೆ ಕ್ಯಾಂಪ್‌ ನಿಂದ ಪ್ರಶಾಂತ್‌, ಸುಗ್ರೀವ, ಮತ್ತಿಗೋಡು ಕ್ಯಾಂಪ್‌ ನಿಂದ ಮಹೇಂದ್ರ, ದೊಡ್ಡಹರವೆಯಿಂದ ಲಕ್ಷ್ಮೀ, ರಾಂಪುರ ಕ್ಯಾಂಪ್‌ ನಿಂದ ಹಿರಣ್ಯ ಆನೆಗಳನ್ನ ಮೈಸೂರಿಗೆ ಕರೆದುಕೊಂಡು ಬರಲಾಗುತ್ತದೆ.

ದುಬಾರ್‌ ಕ್ಯಾಂಪ್‌ ನಿಂದ ಅನುಭವಿ ಪ್ರಶಾಂತ್‌, ಅಯ್ಯಪ್ಪ, ರಾಮಾಪುರ ಕ್ಯಾಂಪ್‌ ನಿಂದ ಪಾರ್ಥಸಾರಥಿ, ಹಾಗೂ ಮಾಲಾದೇವಿ ಆನೆಗಳನ್ನ ಆಯ್ಕೆ ಮಾಡಿ ಕಾಯ್ದಿರಿಸಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

6 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

9 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

12 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

12 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

12 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

12 hours ago