ಮೈಸೂರು

ಮೈಸೂರು ದಸರಾ ಗಜಪಡೆಗಳ ಶಾರ್ಟ್ ಲಿಸ್ಟ್ ರೆಡಿ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಮುಖವಾದ ಆಕರ್ಷಣೆ ಅಂದರೆ ಅದು ದಸರಾ ಗಜಪಡೆ. ಜಂಬೂಸವಾರಿ ಮೆರವಣಿಗೆಯಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು.

ಅಕ್ಟೋಬರ್‌ ೧೨ ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, ಈಗಾಗಲೇ ೨೦೨೪ ರ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ದಸರಾ ಗಜಪಡೆಗಳ ಶಾರ್ಟ್‌ ಲಿಸ್ಟ್‌ ರೆಡಿಯಾಗಿದೆ.

ಈ ಬಾರಿ ೧೪ ಆನೆಗಳು, ಹೆಚ್ಚುವರಿ ನಾಲ್ಕು ಆನೆ ಸೇರಿದಂತೆ ೧೮ ಆನೆಗಳನ್ನು ಅಂತಿಮಗೊಳಿಸಲು ಉದ್ದೇಶಿಸಲಾಗಿದೆ. ಈ ಆನೆಗಳು ಆಗಸ್ಟ್‌ ೯ ಅಥವಾ ೧೧ ರಂದು ಮೈಸೂರಿಗೆ ಆಗಮಿಸಲಿವೆ. ಮೊದಲ ತಂಡದಲ್ಲಿ ೯ ಆನೆಗಳು ಬರಲಿವೆ.

ಇನ್ನು ರಾಜ್ಯದಾದ್ಯಂತ ಉತ್ತಮವಾದ ಮಳೆಯಾಗಿರುವ ಕಾರಣ ಈ ಬಾರಿ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲು ಚಿಂತನೆ ನಡೆಸಲಾಗಿದ್ದು, ಈ ಹಿನ್ನೆಲೆಯಲ್ಲಿ ಆನೆಗಳಿಗೆ ಹೆಚ್ಚಿನ ತರಬೇತಿ ನೀಡುವುದಕ್ಕಾಗಿ ೬೦ ದಿನ ಮುಂಚಿತವಾಗಿ ಆನೆಗಳನ್ನ ಮೈಸೂರಿಗೆ ಕರೆದುಕೊಂಡು ಬರಲು ಉದ್ದೇಶಿಸಲಾಗಿದೆ.

ಈಗಾಗಲೇ ನಾಗರಹೊಳೆ  ಅರಣ್ಯ ವ್ಯಾಪ್ತಿಯ ಮತ್ತಿಗೋಡು, ಭೀಮನಕಟ್ಟೆ, ದೊಡ್ಡಹರವೆ, ಕೊಡಗಿನ ದುಬಾರೆ, ಬಂಡೀಪುರದ ರಾಂಪುರ ಕ್ಯಾಂಪ್‌ ಗೆ ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್‌ ಬಿಎಂ ಶರಣಬಸಪ್ಪ ನೇತೃತ್ವದ ಅಧಿಕಾರಿಗಳ ತಂಡ ತೆರಳಿ ಒಟ್ಟು ೨೨ ಆನೆಗಳನ್ನ ಪರಿಶೀಲನೆ ಮಾಡಿದ್ದಾರೆ. ಅವುಗಳಲ್ಲಿ ೧೮ ಆನೆಗಳ ಪಟ್ಟಿ ಸಿದ್ದಪಡಿಸಿ ೧೪ಆನೆ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿವೆ. ಉಳಿದ ೪ ಆನೆಗಳನ್ನ ಕಾಯ್ದಿರಿಸಲಾಗಿದೆ.

ಆಯ್ಕೆಯಾಗಿರುವ ೧೪ ಆನೆಗಳಲ್ಲಿ ಮೊದಲ ತಂಡದಲ್ಲಿ ೯ ಆನೆಗಳನ್ನ ಗಜಪಯಣದ ಮೂಲಕ ಮೈಸೂರಿಗೆ ಕರೆತರಲಾಗುತ್ತಿದೆ. ಮೊದಲ ತಂಡದಲ್ಲಿ ಮತ್ತಿಗೋಡು ಕ್ಯಾಂಪ್‌ ನಿಂದ ಗಜಪಡೆ ನಾಯಕ ಅಭಿಮನ್ಯು, ಭೀಮ, ಹೊಸ ಆನೆ ಏಕಲವ್ಯ, ಭೀಮನಕಟ್ಟೆ ಕ್ಯಾಂಪ್‌ ನಿಂದ ವರಲಕ್ಷ್ಮೀ, ದುಬಾರೆ ಕ್ಯಾಂಪ್‌ ನಿಂದ ಧನಂಜಯ, ಗೋಪಿ, ಕಂಜನ್‌, ರಾಂಪುರ ಕ್ಯಾಂಪ್‌ ನಿಂದ ರೋಹಿತ, ಲಕ್ಷ್ಮೀ  ಆನೆಗಳು ಮೈಸೂರಿಗೆ ಎಂಟ್ರಿ ಕೊಡಲಿವೆ.

ಇನ್ನು ಎರಡನೇ ತಂಡದಲ್ಲಿ ದುಬಾರೆ ಕ್ಯಾಂಪ್‌ ನಿಂದ ಪ್ರಶಾಂತ್‌, ಸುಗ್ರೀವ, ಮತ್ತಿಗೋಡು ಕ್ಯಾಂಪ್‌ ನಿಂದ ಮಹೇಂದ್ರ, ದೊಡ್ಡಹರವೆಯಿಂದ ಲಕ್ಷ್ಮೀ, ರಾಂಪುರ ಕ್ಯಾಂಪ್‌ ನಿಂದ ಹಿರಣ್ಯ ಆನೆಗಳನ್ನ ಮೈಸೂರಿಗೆ ಕರೆದುಕೊಂಡು ಬರಲಾಗುತ್ತದೆ.

ದುಬಾರ್‌ ಕ್ಯಾಂಪ್‌ ನಿಂದ ಅನುಭವಿ ಪ್ರಶಾಂತ್‌, ಅಯ್ಯಪ್ಪ, ರಾಮಾಪುರ ಕ್ಯಾಂಪ್‌ ನಿಂದ ಪಾರ್ಥಸಾರಥಿ, ಹಾಗೂ ಮಾಲಾದೇವಿ ಆನೆಗಳನ್ನ ಆಯ್ಕೆ ಮಾಡಿ ಕಾಯ್ದಿರಿಸಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

9 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

22 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

23 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

23 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

23 hours ago