ಮೈಸೂರು

ಮೈಸೂರು ದಸರಾ ಗಜಪಡೆಗಳ ಶಾರ್ಟ್ ಲಿಸ್ಟ್ ರೆಡಿ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಮುಖವಾದ ಆಕರ್ಷಣೆ ಅಂದರೆ ಅದು ದಸರಾ ಗಜಪಡೆ. ಜಂಬೂಸವಾರಿ ಮೆರವಣಿಗೆಯಲ್ಲಿ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುವ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಗಜಪಡೆ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು.

ಅಕ್ಟೋಬರ್‌ ೧೨ ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು, ಈಗಾಗಲೇ ೨೦೨೪ ರ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ದಸರಾ ಗಜಪಡೆಗಳ ಶಾರ್ಟ್‌ ಲಿಸ್ಟ್‌ ರೆಡಿಯಾಗಿದೆ.

ಈ ಬಾರಿ ೧೪ ಆನೆಗಳು, ಹೆಚ್ಚುವರಿ ನಾಲ್ಕು ಆನೆ ಸೇರಿದಂತೆ ೧೮ ಆನೆಗಳನ್ನು ಅಂತಿಮಗೊಳಿಸಲು ಉದ್ದೇಶಿಸಲಾಗಿದೆ. ಈ ಆನೆಗಳು ಆಗಸ್ಟ್‌ ೯ ಅಥವಾ ೧೧ ರಂದು ಮೈಸೂರಿಗೆ ಆಗಮಿಸಲಿವೆ. ಮೊದಲ ತಂಡದಲ್ಲಿ ೯ ಆನೆಗಳು ಬರಲಿವೆ.

ಇನ್ನು ರಾಜ್ಯದಾದ್ಯಂತ ಉತ್ತಮವಾದ ಮಳೆಯಾಗಿರುವ ಕಾರಣ ಈ ಬಾರಿ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲು ಚಿಂತನೆ ನಡೆಸಲಾಗಿದ್ದು, ಈ ಹಿನ್ನೆಲೆಯಲ್ಲಿ ಆನೆಗಳಿಗೆ ಹೆಚ್ಚಿನ ತರಬೇತಿ ನೀಡುವುದಕ್ಕಾಗಿ ೬೦ ದಿನ ಮುಂಚಿತವಾಗಿ ಆನೆಗಳನ್ನ ಮೈಸೂರಿಗೆ ಕರೆದುಕೊಂಡು ಬರಲು ಉದ್ದೇಶಿಸಲಾಗಿದೆ.

ಈಗಾಗಲೇ ನಾಗರಹೊಳೆ  ಅರಣ್ಯ ವ್ಯಾಪ್ತಿಯ ಮತ್ತಿಗೋಡು, ಭೀಮನಕಟ್ಟೆ, ದೊಡ್ಡಹರವೆ, ಕೊಡಗಿನ ದುಬಾರೆ, ಬಂಡೀಪುರದ ರಾಂಪುರ ಕ್ಯಾಂಪ್‌ ಗೆ ಮೈಸೂರು ವನ್ಯಜೀವಿ ವಿಭಾಗದ ಡಿಸಿಎಫ್‌ ಬಿಎಂ ಶರಣಬಸಪ್ಪ ನೇತೃತ್ವದ ಅಧಿಕಾರಿಗಳ ತಂಡ ತೆರಳಿ ಒಟ್ಟು ೨೨ ಆನೆಗಳನ್ನ ಪರಿಶೀಲನೆ ಮಾಡಿದ್ದಾರೆ. ಅವುಗಳಲ್ಲಿ ೧೮ ಆನೆಗಳ ಪಟ್ಟಿ ಸಿದ್ದಪಡಿಸಿ ೧೪ಆನೆ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿವೆ. ಉಳಿದ ೪ ಆನೆಗಳನ್ನ ಕಾಯ್ದಿರಿಸಲಾಗಿದೆ.

ಆಯ್ಕೆಯಾಗಿರುವ ೧೪ ಆನೆಗಳಲ್ಲಿ ಮೊದಲ ತಂಡದಲ್ಲಿ ೯ ಆನೆಗಳನ್ನ ಗಜಪಯಣದ ಮೂಲಕ ಮೈಸೂರಿಗೆ ಕರೆತರಲಾಗುತ್ತಿದೆ. ಮೊದಲ ತಂಡದಲ್ಲಿ ಮತ್ತಿಗೋಡು ಕ್ಯಾಂಪ್‌ ನಿಂದ ಗಜಪಡೆ ನಾಯಕ ಅಭಿಮನ್ಯು, ಭೀಮ, ಹೊಸ ಆನೆ ಏಕಲವ್ಯ, ಭೀಮನಕಟ್ಟೆ ಕ್ಯಾಂಪ್‌ ನಿಂದ ವರಲಕ್ಷ್ಮೀ, ದುಬಾರೆ ಕ್ಯಾಂಪ್‌ ನಿಂದ ಧನಂಜಯ, ಗೋಪಿ, ಕಂಜನ್‌, ರಾಂಪುರ ಕ್ಯಾಂಪ್‌ ನಿಂದ ರೋಹಿತ, ಲಕ್ಷ್ಮೀ  ಆನೆಗಳು ಮೈಸೂರಿಗೆ ಎಂಟ್ರಿ ಕೊಡಲಿವೆ.

ಇನ್ನು ಎರಡನೇ ತಂಡದಲ್ಲಿ ದುಬಾರೆ ಕ್ಯಾಂಪ್‌ ನಿಂದ ಪ್ರಶಾಂತ್‌, ಸುಗ್ರೀವ, ಮತ್ತಿಗೋಡು ಕ್ಯಾಂಪ್‌ ನಿಂದ ಮಹೇಂದ್ರ, ದೊಡ್ಡಹರವೆಯಿಂದ ಲಕ್ಷ್ಮೀ, ರಾಂಪುರ ಕ್ಯಾಂಪ್‌ ನಿಂದ ಹಿರಣ್ಯ ಆನೆಗಳನ್ನ ಮೈಸೂರಿಗೆ ಕರೆದುಕೊಂಡು ಬರಲಾಗುತ್ತದೆ.

ದುಬಾರ್‌ ಕ್ಯಾಂಪ್‌ ನಿಂದ ಅನುಭವಿ ಪ್ರಶಾಂತ್‌, ಅಯ್ಯಪ್ಪ, ರಾಮಾಪುರ ಕ್ಯಾಂಪ್‌ ನಿಂದ ಪಾರ್ಥಸಾರಥಿ, ಹಾಗೂ ಮಾಲಾದೇವಿ ಆನೆಗಳನ್ನ ಆಯ್ಕೆ ಮಾಡಿ ಕಾಯ್ದಿರಿಸಲಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

8 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

9 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

9 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

15 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

15 hours ago