Mysore
23
broken clouds
Light
Dark

ರೌಡಿ ಶೀಟರ್‌ಗೆ ನೀಡಿದ ರಾಜ್ಯೋತ್ಸವ ಪ್ರಶಸ್ತಿ ಹಿಂಪಡೆಯಲು ಮುಂದಾದ ಜಿಲ್ಲಾಡಳಿತ!

ಮೈಸೂರು: ಕಾಂಗ್ರೆಸ್ ನಾಯಕನೆಂಬ ಕಾರಣಕ್ಕೆ ಕನ್ನಡ ರಾಜ್ಯೋತ್ಸವದಂದು ರೌಡಿ ಶೀಟರ್ ಒಬ್ಬನಿಗೆ ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದೀಗ ಪ್ರಶಸ್ತಿಯನ್ನು ಹಿಂಪಡೆಯಲು ಮೈಸೂರು ಜಿಲ್ಲಾಡಳಿತ ನಿರ್ಧಾರಿಸಿದೆ. ಕಾಂಗ್ರೆಸ್ ನಾಯಕ ಅಶೋಕ್ ,ನಗರದ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು, ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದೀಗ ಅಶೋಕ್ ಅವರಿಗೆ ನೀಡಿದ್ದ ಪ್ರಶಸ್ತಿಯನ್ನು ಹಿಂಪಡೆಯಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕ ಸುಂದರ್ಶನ್ ತಿಳಿಸಿದ್ದಾರೆ.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ