ಮೈಸೂರು

ಮೈಸೂರು | ಆರೋಗ್ಯ ಕಾರ್ಯಕ್ರಮ ; ಶೇ.100ರಷ್ಟು ಪ್ರಗತಿಗೆ ಸೂಚನೆ

ಮೈಸೂರು: 2024-25ನೇ ಸಾಲಿನ ಮಾರ್ಚ್-25ರ ಅಂತ್ಯಕ್ಕೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಭೌತಿಕ ಮತ್ತು ಆರ್ಥಿಕ ಪ್ರಗತಿ ಪರಿಶೀಲನೆ ಬುಧವಾರ ನಡೆಯಿತು.

2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಅನುಷ್ಠಾನ ಮಾಡಲಾಗಿರುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಸಭೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್. ಯುಕೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಆಯೋಜಿಸಲಾಗಿತ್ತು.

ಸಮುದಾಯ ಮಟ್ಟದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಸವಲತ್ತು ಮತ್ತು ಸೌಲಭ್ಯಗಳ ಬಗ್ಗೆ ಪರಿಶೀಲಿಸಿದ ಯುಕೇಶ್‌ ಕುಮಾರ್, ತಾಯಿ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಹೈರಿಸ್ಕ್ ಮತ್ತು ಸಾಮಾನ್ಯ ಗರ್ಭಿಣಿ ಮಹಿಳಯರು ಮತ್ತು ಬಾಣಂತಿಯರ ಆರೋಗ್ಯ ತಪಾಸಣೆ ಕುರಿತು ಮನೆ ಭೇಟಿ, ಹಾಗೂ ಪಿ.ಎಂ.ಎಸ್.ಎಂ.ಎ ಕಾರ್ಯಕ್ರಮದಲ್ಲಿ ಗರ್ಭಿಣಿ ಮಹಿಳೆಯರ ತಪಾಸಣೆ ಮಕ್ಕಳ ಆರೋಗ್ಯ ಕಾರ್ಯಕ್ರದಡಿಯಲ್ಲಿ ಸಮುದಾಯ ಮಟ್ಟದಲ್ಲಿ ನವಜಾತ ಶಿಶುಗಳ ಆರೈಕೆ ಹಾಗೂ ಸಮುದಾಯ ಮಟ್ಟದಲ್ಲಿ ಮಕ್ಕಳ ಆರೈಕೆ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿಯಲ್ಲಿ ಲಸಿಕೆಯಿಂದ ವಂಚಿತವಾಗದಂತೆ ಶೇ 100 ರಷ್ಟು ಪ್ರಗತಿ ಸಾಧಿಸಲು ಸೂಚಿಸಿದರು.

ವಿಶೇಷ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಿಗೆ ಲಸಿಕಾಕರಣವನ್ನು ಮಾಡಲು ಸೂಚಿಸಿದರು.

ಬಾಲ್ಯ ವಿವಾಹ ಕಾಯ್ದೆ, ಭ್ರೂಣಹತ್ಯೆ ಹಾಗೂ ಪೋಕ್ಸೋ ಕಾಯ್ದೆಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ಕುಟುಂಬ ಕಲ್ಯಾಣ ನಿಯಂತ್ರಣ ಕಾರ್ಯಕ್ರಮದಲ್ಲಿ ಸಂತಾನ ನಿಯಂತ್ರಣಕೆ ಇರುವ ಶಾಶ್ವತ ಮತ್ತು ತಾತ್ಕಾಲಿಕ ವಿಧಾನಗಳು, ಸಂತಾನಹರಣ ಚಿಕಿತ್ಸೆ ಹಾಗೂ ಕಾಯಕಲ್ಪ ಕಾರ್ಯಕ್ರಮದಲ್ಲಿ ಪ್ರಮಾಣೀಕೃತವಾಗಿರುವ ಆರೋಗ್ಯ ಕೇಂದ್ರಗಳ ಪರಿಶೀಲನೆ ನಡೆಸಿ, ಸದರಿ ಕಾರ್ಯಕ್ರಮದಲ್ಲಿ ಶೇಕಡಾ 100 ರಷ್ಟು ಪ್ರಗತಿ ಸಾಧಿಸಲು ನಿರ್ದೇಶನ ನೀಡಿದರು.

2024-25ನೇ ಸಾಲಿನಲ್ಲಿ ಕುಂಠಿತವಾಗಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಪ್ರಗತಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಾತ್ಮಕ ಕ್ರಿಯೋಜನೆಯನ್ನು ಸಿದ್ದಪಡಿಸಲು ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಿಗೆ ಹಾಗೂ ಅಧೀನ ಸಿಬ್ಬಂದಿಗಳಿಗೆ ಸೂಚಿಸಿದರು.

ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು, ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಜಿಲ್ಲಾ ಮಟ್ಟದ ಎಲ್ಲಾ ಕಾರ್ಯಕ್ರಮಗಳ ವ್ಯವಸ್ಥಾಪಕರು, ಸಲಹೆಗಾರರು, ಕಾರ್ಯಕ್ರಮ ಸಂಯೋಜಕರು ಹಾಗೂ ಆರೋಗ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

9 hours ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

10 hours ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

10 hours ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

10 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

11 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

11 hours ago