ಮೈಸೂರು

ಮೈಸೂರು | ಆರೋಗ್ಯ ಕಾರ್ಯಕ್ರಮ ; ಶೇ.100ರಷ್ಟು ಪ್ರಗತಿಗೆ ಸೂಚನೆ

ಮೈಸೂರು: 2024-25ನೇ ಸಾಲಿನ ಮಾರ್ಚ್-25ರ ಅಂತ್ಯಕ್ಕೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಭೌತಿಕ ಮತ್ತು ಆರ್ಥಿಕ ಪ್ರಗತಿ ಪರಿಶೀಲನೆ ಬುಧವಾರ ನಡೆಯಿತು.

2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಅನುಷ್ಠಾನ ಮಾಡಲಾಗಿರುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಸಭೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್. ಯುಕೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿಯಲ್ಲಿ ಆಯೋಜಿಸಲಾಗಿತ್ತು.

ಸಮುದಾಯ ಮಟ್ಟದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಸವಲತ್ತು ಮತ್ತು ಸೌಲಭ್ಯಗಳ ಬಗ್ಗೆ ಪರಿಶೀಲಿಸಿದ ಯುಕೇಶ್‌ ಕುಮಾರ್, ತಾಯಿ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಹೈರಿಸ್ಕ್ ಮತ್ತು ಸಾಮಾನ್ಯ ಗರ್ಭಿಣಿ ಮಹಿಳಯರು ಮತ್ತು ಬಾಣಂತಿಯರ ಆರೋಗ್ಯ ತಪಾಸಣೆ ಕುರಿತು ಮನೆ ಭೇಟಿ, ಹಾಗೂ ಪಿ.ಎಂ.ಎಸ್.ಎಂ.ಎ ಕಾರ್ಯಕ್ರಮದಲ್ಲಿ ಗರ್ಭಿಣಿ ಮಹಿಳೆಯರ ತಪಾಸಣೆ ಮಕ್ಕಳ ಆರೋಗ್ಯ ಕಾರ್ಯಕ್ರದಡಿಯಲ್ಲಿ ಸಮುದಾಯ ಮಟ್ಟದಲ್ಲಿ ನವಜಾತ ಶಿಶುಗಳ ಆರೈಕೆ ಹಾಗೂ ಸಮುದಾಯ ಮಟ್ಟದಲ್ಲಿ ಮಕ್ಕಳ ಆರೈಕೆ, ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಡಿಯಲ್ಲಿ ಲಸಿಕೆಯಿಂದ ವಂಚಿತವಾಗದಂತೆ ಶೇ 100 ರಷ್ಟು ಪ್ರಗತಿ ಸಾಧಿಸಲು ಸೂಚಿಸಿದರು.

ವಿಶೇಷ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಿಗೆ ಲಸಿಕಾಕರಣವನ್ನು ಮಾಡಲು ಸೂಚಿಸಿದರು.

ಬಾಲ್ಯ ವಿವಾಹ ಕಾಯ್ದೆ, ಭ್ರೂಣಹತ್ಯೆ ಹಾಗೂ ಪೋಕ್ಸೋ ಕಾಯ್ದೆಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ಕುಟುಂಬ ಕಲ್ಯಾಣ ನಿಯಂತ್ರಣ ಕಾರ್ಯಕ್ರಮದಲ್ಲಿ ಸಂತಾನ ನಿಯಂತ್ರಣಕೆ ಇರುವ ಶಾಶ್ವತ ಮತ್ತು ತಾತ್ಕಾಲಿಕ ವಿಧಾನಗಳು, ಸಂತಾನಹರಣ ಚಿಕಿತ್ಸೆ ಹಾಗೂ ಕಾಯಕಲ್ಪ ಕಾರ್ಯಕ್ರಮದಲ್ಲಿ ಪ್ರಮಾಣೀಕೃತವಾಗಿರುವ ಆರೋಗ್ಯ ಕೇಂದ್ರಗಳ ಪರಿಶೀಲನೆ ನಡೆಸಿ, ಸದರಿ ಕಾರ್ಯಕ್ರಮದಲ್ಲಿ ಶೇಕಡಾ 100 ರಷ್ಟು ಪ್ರಗತಿ ಸಾಧಿಸಲು ನಿರ್ದೇಶನ ನೀಡಿದರು.

2024-25ನೇ ಸಾಲಿನಲ್ಲಿ ಕುಂಠಿತವಾಗಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ ಪ್ರಗತಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಾತ್ಮಕ ಕ್ರಿಯೋಜನೆಯನ್ನು ಸಿದ್ದಪಡಿಸಲು ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳಿಗೆ ಹಾಗೂ ಅಧೀನ ಸಿಬ್ಬಂದಿಗಳಿಗೆ ಸೂಚಿಸಿದರು.

ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳು, ಎಲ್ಲಾ ತಾಲ್ಲೂಕುಗಳ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಜಿಲ್ಲಾ ಮಟ್ಟದ ಎಲ್ಲಾ ಕಾರ್ಯಕ್ರಮಗಳ ವ್ಯವಸ್ಥಾಪಕರು, ಸಲಹೆಗಾರರು, ಕಾರ್ಯಕ್ರಮ ಸಂಯೋಜಕರು ಹಾಗೂ ಆರೋಗ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

10 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

10 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

21 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

21 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

21 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

21 hours ago