ಮೈಸೂರು

ಮೈಸೂರು | ಆಯುಧಪೂಜೆ, ವಿಜಯದಶಮಿಗೆ ಖರೀದಿ ಭರಾಟೆ ಜೋರು

ಮೈಸೂರು : ಇಂದು ಎಲ್ಲೆಡೆ ನವರಾತ್ರಿ ಆಯುಧ ಪೂಜೆ ನಾಳೆ ವಿಜಯದಶಮಿ ಸಂಭ್ರಮ. ಹೀಗಾಗಿ ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಬೆಲೆ ಏರಿಕೆ ಮಧ್ಯೆ ಜನರು ಹೂವು, ಹಣ್ಣು, ತರಕಾರಿ, ಪೂಜಾ ಸಾಮಾಗ್ರಿ ಖರೀದಿಸುತ್ತಿದ್ದಾರೆ.

ಕೆ.ಆರ್​.ಮಾರುಕಟ್ಟೆಗೆ ಬರುವವರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಮೆಟ್ರೊಪಾಲ್‌, ಅರಸು ರಸ್ತೆಯಿಂದ ಕೆ.ಆರ್.ಮಾರುಕಟ್ಟೆವರೆಗೆ ಟ್ರಾಫಿಕ್​ ಜಾಮ್ ಉಂಟಾಗಿದೆ. ಅಗತ್ಯ ವಸ್ತುಗಳ ಖರೀದಿ ಭರಾಟೆ ಜೋರಾಗಿದೆ. ಆಯುಧ ಪೂಜೆ ಹಾಗೂ ವಿಜಯದಶಮಿ ಹಿನ್ನೆಲೆಯಲ್ಲಿ ಗುರುವಾರ ಸರ್ಕಾರಿ ರಜೆ ಇರುವುದರಿಂದ ಕೆಲವು ಕಚೇರಿಗಳು, ವ್ಯಾಪಾರ ಮಳಿಗೆಗಳು, ಗೋದಾಮು, ಕಾರ್ಖಾನೆಗಳಲ್ಲಿ ನಿನ್ನೆಯ ಪೂಜೆ ನೆರವೇರಿಸಲಾಗಿದ್ದು, ಹೀಗಿದ್ದರೂ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದ ದೃಶ್ಯಗಳು ಕಂಡುಬಂದವು.

ಇದನ್ನೂ ಓದಿ:-ಉಸಿರಾಟದ ಸಮಸ್ಯೆಯಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ನಗರದ ಕೆ.ಆರ್‌.ಮಾರುಕಟ್ಟೆ, ಕೆ.ಆರ್‌ ಆಸ್ಪತ್ರೆ ವೃತ್ತ, ಗಾಂಧಿ ಸ್ಕೈರ್, ವಿವಿ ಮೊಹಲ್ಲ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ಹೂ-ಹಣ್ಣು, ಬಾಳೆಕಂದು, ನಿಂಬೆಹಣ್ಣು, ಬೂದುಕುಂಬಳಕಾಯಿ, ಕಡ್ಲೆಪುರಿ, ಸಿಹಿ ಪದಾರ್ಥಗಳ ಮಾರಾಟ ದೃಶ್ಯಗಳು ಕಂಡುಬಂದವು.

ವಾಹನಗಳಿಗೆ ಹಾಗೂ ಕಾರ್ಖಾನೆಗಳ ಯಂತ್ರೋಪಕರಣಗಳಿಗೆ ಹೆಚ್ಚಾಗಿ ಬಳಕೆಯಾಗುವ ಬೂದುಕುಂಬಳಕಾಯಿ ಬೆಲೆ ಹೆಚ್ಚಾಗಿದ್ದು, ಸಗಟು ದರದಲ್ಲಿ ಕೆಜಿಗೆ 25 ರೂ.ಗಳಿಂದ 30 ರೂ.ಗೆ ಮಾರಾಟವಾಗುತ್ತಿದ್ದರೆ, ಚಿಲ್ಲರೆಯಾಗಿ ಕೆಜಿಗೆ 40 ರಿಂದ 60 ರೂ. ಮಾರಾಟ ಮಾಡಲಾಗುತ್ತಿದೆ. ಇನ್ನೂ ಹಲವೆಡೆ ಗಾತ್ರಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ.

ಬೂದುಕುಂಬಳದ ಬೇಡಿಕೆ ಹೆಚ್ಚಾದ್ದರಿಂದ ಬೆಲೆಯೂ ಸಹ ಹೆಚ್ಚಳವಾಗಿದೆ. ಹಬ್ಬಗಳ ಸಂದರ್ಭದಲ್ಲಿ ಹೂಗಳ ಬೆಲೆ ಸಾಮಾನ್ಯವಾಗಿ ಹೆಚ್ಚಾಗಿರುತ್ತದೆ. ಸೇವಂತಿ ಮಾರು 150 ರೂ., ಕೆಜಿಗೆ 200 ರೂ. ಚೆಂಡು ಹೂವಿನ ಬೆಲೆಯೂ ಸಹ ತುಸು ಏರಿಕೆಯಾಗಿದೆ, ಮಲ್ಲಿಗೆ 400 ರೂ.ಗಳಿಂದ 800 ರೂ., ಗುಲಾಬಿ 300 ರೂ., ಕನಕಾಂಬರ 1000 ರೂ., ಸುಗಂಧರಾಜ 300 ರೂ.ಗಳಿಗೆ ಮಾರಾಟವಾಗುತ್ತಿದೆ. ಹಣ್ಣುಗಳ ಬೆಲೆಯೂ ಏರಿಕೆಯಾಗಿದ್ದು, ದಾಳಿಂಬೆ 150 ರೂ., ಸೇಬು 150 ರೂ.ಗಳಿಂದ 200, ಮೂಸಂಬೆ 80 ರಿಂದ 100, ಏಲಕ್ಕಿ ಬಾಳೆ 120 ರೂ., ಪಚ್ಚಬಾಳೆ 50 ರೂ.ಗಳಿಗೆ ಮಾರಾಟವಾಗುತ್ತಿದ್ದರೆ, ಜೋಡಿ ಬಾಳೆಕಂದು ಗಾತ್ರಕ್ಕೆ ತಕ್ಕಂತೆ 50 ರೂ.ಗಳಿಂದ 500 ಗಳಿಗೆ ಮಾರಾಟವಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

38 mins ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

3 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

3 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

3 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

5 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

6 hours ago