ಮೈಸೂರು

ಮೈಸೂರಿಗೆ ಐಐಟಿ ಬೇಕೇಂಬ ದಶಕದ ಕೂಗಿಗೆ ಮರುಜೀವ ; ಕೇಂದ್ರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಕೆ

ಮೈಸೂರು : ಮೈಸೂರಿನಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ ನಡೆಸಬೇಕೆಂಬ ದಶಕದ ಕೂಗಿಗೆ ಮರುಜೀವ ಬಂದಿದ್ದು,ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿಯೂ ಕೂಡ ಮೈಸೂರಿಗೆ ಐಐಟಿ ಬರಬೇಕೆಂದು ಚರ್ಚೆ ನಡೆಯಿತು.

ಸಾಂಸ್ಕೃತಿಕ ನಗರಿ ಮೈಸೂರು ಶೈಕ್ಷಣಿಕ ಚಟುವಟಿಕೆಗಳ ಕೇಂದ್ರವಾಗಿರುವುದರಿಂದ ದೇಶ ವಿದೇಶಗಳಿಂದ ವ್ಯಾಸಂಗ ಮಾಡಲು ವಿದ್ಯಾರ್ಥಿಗಳು ಆಗಮಿಸುತ್ತಾರೆ. ಅಲ್ಲದೆ ಮೈಸೂರಿನಲ್ಲಿ ಶತಮಾನ ಕಂಡಿರುವ ಮೈಸೂರು ವಿವಿ, ರಾಜ್ಯದ ಏಕೈಕ ಕರ್ನಾಟಕ ಮುಕ್ತ ವಿವಿ, ಡಾ.ಗಂಗೂಬಾಯಿ ಹಾನಗಲ್‌ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಹಾಗೂ ಖಾಸಗಿಯಾಗಿ ಜೆಎಸ್‌ ಎಸ್‌ ವಿವಿ ಸೇರಿ ಒಟ್ಟು ೪ ವಿಶ್ವವಿದ್ಯಾನಿಲಯಗಳು ಇದೆ. ಅಷ್ಟೇ ಅಲ್ಲದೆ ಮೈಸೂರು ಮೆಡಿಕಲ್‌ ಕಾಲೇಜು, ಫಾರ್ಮಸಿ ಕಾಲೇಜು, ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಗಳೂ ಸಹ ಇದೆ. ಆದರೆ ಭಾರತೀಯ ತಂತ್ರಜ್ಞಾನ ಸಂಸ್ಥೆ ಇಲ್ಲ.  ಹೀಗಾಗಿ ಕಡಿಮೆ ವೆಚ್ಚದಲ್ಲಿ ಪ್ರತಿಭಾವಂತ ಮಕ್ಕಳು ತಾಂತ್ರಿಕ ಶಿಕ್ಷಣ ಪಡೆಯಲು ಮೈಸೂರಿಗೂ ಐಐಟಿ ಸಿಗಬೇಕೆಬುದು ಸಂಶೋಧಕರು ಹಾಗೂ ತಜ್ಞರ ಅಭಿಪ್ರಾಯವಾಗಿದೆ.

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿ ಮೈಸೂರಿನಲ್ಲಿ ಐಐಟಿ ಸ್ಥಾಪನೆ ಬಗ್ಗೆ ಚರ್ಚೆಯಾಗಿದೆ. ಅಂತಿಮವಾಗಿ ರಾಜ್ಯ ಸರ್ಕಾರ ಈ ಬಗ್ಗೆ ಪ್ರಸ್ತಾವ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಅನುಮೋದನೆ ನೀಡಬೇಕಿದೆ. ಒಂದು ವೇಳೆ ಕೇಂದ್ರ ಅನುಮೋದನೆ ನೀಡಿದ್ದಲ್ಲೇ ಆದಲ್ಲಿ ಮೈಸೂರಿಗರ ಬಹು ವರ್ಷಗಳ ಬೇಡಿಕೆಯ ಕನಸು ನನಸಾಗುತ್ತದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

5 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

5 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

5 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

5 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

5 hours ago