ಮೈಸೂರು : ಮೈಸೂರಿನಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ ನಡೆಸಬೇಕೆಂಬ ದಶಕದ ಕೂಗಿಗೆ ಮರುಜೀವ ಬಂದಿದ್ದು,ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿಯೂ ಕೂಡ ಮೈಸೂರಿಗೆ ಐಐಟಿ ಬರಬೇಕೆಂದು ಚರ್ಚೆ ನಡೆಯಿತು.
ಸಾಂಸ್ಕೃತಿಕ ನಗರಿ ಮೈಸೂರು ಶೈಕ್ಷಣಿಕ ಚಟುವಟಿಕೆಗಳ ಕೇಂದ್ರವಾಗಿರುವುದರಿಂದ ದೇಶ ವಿದೇಶಗಳಿಂದ ವ್ಯಾಸಂಗ ಮಾಡಲು ವಿದ್ಯಾರ್ಥಿಗಳು ಆಗಮಿಸುತ್ತಾರೆ. ಅಲ್ಲದೆ ಮೈಸೂರಿನಲ್ಲಿ ಶತಮಾನ ಕಂಡಿರುವ ಮೈಸೂರು ವಿವಿ, ರಾಜ್ಯದ ಏಕೈಕ ಕರ್ನಾಟಕ ಮುಕ್ತ ವಿವಿ, ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಹಾಗೂ ಖಾಸಗಿಯಾಗಿ ಜೆಎಸ್ ಎಸ್ ವಿವಿ ಸೇರಿ ಒಟ್ಟು ೪ ವಿಶ್ವವಿದ್ಯಾನಿಲಯಗಳು ಇದೆ. ಅಷ್ಟೇ ಅಲ್ಲದೆ ಮೈಸೂರು ಮೆಡಿಕಲ್ ಕಾಲೇಜು, ಫಾರ್ಮಸಿ ಕಾಲೇಜು, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಗಳೂ ಸಹ ಇದೆ. ಆದರೆ ಭಾರತೀಯ ತಂತ್ರಜ್ಞಾನ ಸಂಸ್ಥೆ ಇಲ್ಲ. ಹೀಗಾಗಿ ಕಡಿಮೆ ವೆಚ್ಚದಲ್ಲಿ ಪ್ರತಿಭಾವಂತ ಮಕ್ಕಳು ತಾಂತ್ರಿಕ ಶಿಕ್ಷಣ ಪಡೆಯಲು ಮೈಸೂರಿಗೂ ಐಐಟಿ ಸಿಗಬೇಕೆಬುದು ಸಂಶೋಧಕರು ಹಾಗೂ ತಜ್ಞರ ಅಭಿಪ್ರಾಯವಾಗಿದೆ.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿ ಮೈಸೂರಿನಲ್ಲಿ ಐಐಟಿ ಸ್ಥಾಪನೆ ಬಗ್ಗೆ ಚರ್ಚೆಯಾಗಿದೆ. ಅಂತಿಮವಾಗಿ ರಾಜ್ಯ ಸರ್ಕಾರ ಈ ಬಗ್ಗೆ ಪ್ರಸ್ತಾವ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಅನುಮೋದನೆ ನೀಡಬೇಕಿದೆ. ಒಂದು ವೇಳೆ ಕೇಂದ್ರ ಅನುಮೋದನೆ ನೀಡಿದ್ದಲ್ಲೇ ಆದಲ್ಲಿ ಮೈಸೂರಿಗರ ಬಹು ವರ್ಷಗಳ ಬೇಡಿಕೆಯ ಕನಸು ನನಸಾಗುತ್ತದೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…