ಮೈಸೂರು : ಮೈಸೂರಿನಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ ನಡೆಸಬೇಕೆಂಬ ದಶಕದ ಕೂಗಿಗೆ ಮರುಜೀವ ಬಂದಿದ್ದು,ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿಯೂ ಕೂಡ ಮೈಸೂರಿಗೆ ಐಐಟಿ ಬರಬೇಕೆಂದು ಚರ್ಚೆ ನಡೆಯಿತು.
ಸಾಂಸ್ಕೃತಿಕ ನಗರಿ ಮೈಸೂರು ಶೈಕ್ಷಣಿಕ ಚಟುವಟಿಕೆಗಳ ಕೇಂದ್ರವಾಗಿರುವುದರಿಂದ ದೇಶ ವಿದೇಶಗಳಿಂದ ವ್ಯಾಸಂಗ ಮಾಡಲು ವಿದ್ಯಾರ್ಥಿಗಳು ಆಗಮಿಸುತ್ತಾರೆ. ಅಲ್ಲದೆ ಮೈಸೂರಿನಲ್ಲಿ ಶತಮಾನ ಕಂಡಿರುವ ಮೈಸೂರು ವಿವಿ, ರಾಜ್ಯದ ಏಕೈಕ ಕರ್ನಾಟಕ ಮುಕ್ತ ವಿವಿ, ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಹಾಗೂ ಖಾಸಗಿಯಾಗಿ ಜೆಎಸ್ ಎಸ್ ವಿವಿ ಸೇರಿ ಒಟ್ಟು ೪ ವಿಶ್ವವಿದ್ಯಾನಿಲಯಗಳು ಇದೆ. ಅಷ್ಟೇ ಅಲ್ಲದೆ ಮೈಸೂರು ಮೆಡಿಕಲ್ ಕಾಲೇಜು, ಫಾರ್ಮಸಿ ಕಾಲೇಜು, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಗಳೂ ಸಹ ಇದೆ. ಆದರೆ ಭಾರತೀಯ ತಂತ್ರಜ್ಞಾನ ಸಂಸ್ಥೆ ಇಲ್ಲ. ಹೀಗಾಗಿ ಕಡಿಮೆ ವೆಚ್ಚದಲ್ಲಿ ಪ್ರತಿಭಾವಂತ ಮಕ್ಕಳು ತಾಂತ್ರಿಕ ಶಿಕ್ಷಣ ಪಡೆಯಲು ಮೈಸೂರಿಗೂ ಐಐಟಿ ಸಿಗಬೇಕೆಬುದು ಸಂಶೋಧಕರು ಹಾಗೂ ತಜ್ಞರ ಅಭಿಪ್ರಾಯವಾಗಿದೆ.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿ ಮೈಸೂರಿನಲ್ಲಿ ಐಐಟಿ ಸ್ಥಾಪನೆ ಬಗ್ಗೆ ಚರ್ಚೆಯಾಗಿದೆ. ಅಂತಿಮವಾಗಿ ರಾಜ್ಯ ಸರ್ಕಾರ ಈ ಬಗ್ಗೆ ಪ್ರಸ್ತಾವ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಅನುಮೋದನೆ ನೀಡಬೇಕಿದೆ. ಒಂದು ವೇಳೆ ಕೇಂದ್ರ ಅನುಮೋದನೆ ನೀಡಿದ್ದಲ್ಲೇ ಆದಲ್ಲಿ ಮೈಸೂರಿಗರ ಬಹು ವರ್ಷಗಳ ಬೇಡಿಕೆಯ ಕನಸು ನನಸಾಗುತ್ತದೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…