ಮೈಸೂರು : ಮೈಸೂರಿನಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆ ನಡೆಸಬೇಕೆಂಬ ದಶಕದ ಕೂಗಿಗೆ ಮರುಜೀವ ಬಂದಿದ್ದು,ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿಯೂ ಕೂಡ ಮೈಸೂರಿಗೆ ಐಐಟಿ ಬರಬೇಕೆಂದು ಚರ್ಚೆ ನಡೆಯಿತು.
ಸಾಂಸ್ಕೃತಿಕ ನಗರಿ ಮೈಸೂರು ಶೈಕ್ಷಣಿಕ ಚಟುವಟಿಕೆಗಳ ಕೇಂದ್ರವಾಗಿರುವುದರಿಂದ ದೇಶ ವಿದೇಶಗಳಿಂದ ವ್ಯಾಸಂಗ ಮಾಡಲು ವಿದ್ಯಾರ್ಥಿಗಳು ಆಗಮಿಸುತ್ತಾರೆ. ಅಲ್ಲದೆ ಮೈಸೂರಿನಲ್ಲಿ ಶತಮಾನ ಕಂಡಿರುವ ಮೈಸೂರು ವಿವಿ, ರಾಜ್ಯದ ಏಕೈಕ ಕರ್ನಾಟಕ ಮುಕ್ತ ವಿವಿ, ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಹಾಗೂ ಖಾಸಗಿಯಾಗಿ ಜೆಎಸ್ ಎಸ್ ವಿವಿ ಸೇರಿ ಒಟ್ಟು ೪ ವಿಶ್ವವಿದ್ಯಾನಿಲಯಗಳು ಇದೆ. ಅಷ್ಟೇ ಅಲ್ಲದೆ ಮೈಸೂರು ಮೆಡಿಕಲ್ ಕಾಲೇಜು, ಫಾರ್ಮಸಿ ಕಾಲೇಜು, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಗಳೂ ಸಹ ಇದೆ. ಆದರೆ ಭಾರತೀಯ ತಂತ್ರಜ್ಞಾನ ಸಂಸ್ಥೆ ಇಲ್ಲ. ಹೀಗಾಗಿ ಕಡಿಮೆ ವೆಚ್ಚದಲ್ಲಿ ಪ್ರತಿಭಾವಂತ ಮಕ್ಕಳು ತಾಂತ್ರಿಕ ಶಿಕ್ಷಣ ಪಡೆಯಲು ಮೈಸೂರಿಗೂ ಐಐಟಿ ಸಿಗಬೇಕೆಬುದು ಸಂಶೋಧಕರು ಹಾಗೂ ತಜ್ಞರ ಅಭಿಪ್ರಾಯವಾಗಿದೆ.
ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಸಂಸದರ ಸಭೆಯಲ್ಲಿ ಮೈಸೂರಿನಲ್ಲಿ ಐಐಟಿ ಸ್ಥಾಪನೆ ಬಗ್ಗೆ ಚರ್ಚೆಯಾಗಿದೆ. ಅಂತಿಮವಾಗಿ ರಾಜ್ಯ ಸರ್ಕಾರ ಈ ಬಗ್ಗೆ ಪ್ರಸ್ತಾವ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಅನುಮೋದನೆ ನೀಡಬೇಕಿದೆ. ಒಂದು ವೇಳೆ ಕೇಂದ್ರ ಅನುಮೋದನೆ ನೀಡಿದ್ದಲ್ಲೇ ಆದಲ್ಲಿ ಮೈಸೂರಿಗರ ಬಹು ವರ್ಷಗಳ ಬೇಡಿಕೆಯ ಕನಸು ನನಸಾಗುತ್ತದೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…