ಮೈಸೂರು

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5 ವ್ಯಾಪ್ತಿಯ ಮೇಟಗಳ್ಳಿ ಕೆ.ಆರ್.ಎಸ್. ಮುಖ್ಯ ರಸ್ತೆಯಲ್ಲಿ ಜೆಸಿಬಿ ಬಳಸಿ ಭರ್ಜರಿ ತೆರವು ಕಾರ್ಯ ನಡೆಯಿತು.

ಬೆಳಿಗ್ಗೆಯಿಂದ ಆರಂಭವಾದ ಕಾರ್ಯಾಚರಣೆಯಲ್ಲಿ ಪಾಲಿಕೆ ಸಿಬ್ಬಂದಿ ಫುಟ್‌ಪಾತ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಗಳಿಂದ ಇದ್ದ ಪೆಟ್ಟಿಗೆ ಅಂಗಡಿ, ಶೆಡ್, ತಳ್ಳುವ ಗಾಡಿ ಮತ್ತು ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಿದರು. ಅಂದಾಜು 30ಕ್ಕೂ ಹೆಚ್ಚು ಅಂಗಡಿಗಳನ್ನು ಜೆಸಿಬಿ ಮೂಲಕ ಕೆಡವಲಾಯಿತು.

ಒಂದೆಡೆ ಸಾರ್ವಜನಿಕರು “ಈಗಾದರೂ ಫುಟ್‌ಪಾತ್‌ನಲ್ಲಿ ನಡೆದಾಡಲು ಜಾಗ ಸಿಕ್ಕಿತು” ಎಂದು ಸಮಾಧಾನ ವ್ಯಕ್ತಪಡಿಸಿದರೆ, ಇನ್ನೊಂದೆಡೆ ಹಠಾತ್ ತೆರವಿನಿಂದ ಜೀವನೋಪಾಯ ಕಳೆದುಕೊಂಡ ವ್ಯಾಪಾರಿಗಳಲ್ಲಿ ಆತಂಕ ಮನೆಮಾಡಿದೆ.

ಆಯುಕ್ತೆ ಸವಿತಾ ಸೂಚನೆ ಮೇರೆಗೆ ಕಾರ್ಯಾಚರಣೆ
ಪಾಲಿಕೆಯ ನೂತನ ಆಯುಕ್ತೆ ಎಂ.ಕೆ. ಸವಿತಾ ಅವರ ನಿರ್ದೇಶನದಂತೆ ವಲಯ-5ರ ಎ.ಇ.ಇ ಯತೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ವರ್ಕ್ ಇನ್ಸ್‌ಪೆಕ್ಟರ್ ನಾಗರಾಜು, ಹೆಲ್ತ್ ಇನ್ಸ್‌ಪೆಕ್ಟರ್ ಗೀತಾ ಹಾಗೂ ಮೇಟಗಳ್ಳಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅರುಣ್ ನೇತೃತ್ವದ ಪೊಲೀಸ್ ತಂಡ ಭದ್ರತೆ ಒದಗಿಸಿತು.

ಇನ್ನೂ ಮುಂದುವರಿಯಲಿದೆ
“ನಗರದ ಎಲ್ಲಾ ವಲಯಗಳಲ್ಲೂ ಫುಟ್‌ಪಾತ್‌ಗಳನ್ನು ಸಂಚಾರ ಮುಕ್ತಗೊಳಿಸುವವರೆಗೆ ಈ ಕಾರ್ಯಾಚರಣೆ ನಿಲ್ಲುವುದಿಲ್ಲ” ಎಂದು ಪಾಲಿಕೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಯ್ಯಾಜಿರಾವ್ ರಸ್ತೆ, ದೇವರಾಜ ಮಾರುಕಟ್ಟೆ, ನಜರ್‌ಬಾದ್ ಸೇರಿದಂತೆ ಇತರೆ ಒತ್ತುವರಿ ಪ್ರದೇಶಗಳಲ್ಲೂ ಇದೇ ರೀತಿ ಕಾರ್ಯಾಚರಣೆ ನಡೆಸುವುದಾಗಿ ಅವರು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

2 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

4 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

6 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

11 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

11 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

13 hours ago