ಮೈಸೂರು

Mysuru Jobs: ಗುತ್ತಿಗೆ ಆಧಾರದ ನೇಮಕಾತಿ

ಮೈಸೂರು:  2024-25ನೇ ಸಾಲಿಗೆ ಆತ್ಮ ಯೋಜನೆಯಡಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಒಂದು ವರ್ಷದ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ/ಕೃಷಿ ಸಂಬoಧಿತ ವಿಷಯಗಳಲ್ಲಿ ಸ್ನಾತಕೊತ್ತರ ಪದವಿ, ಕಂಪ್ಯೂಟರ್ ಜ್ಞಾನ ಹಾಗೂ ಕೃಷಿ ಸಂಬoಧಿತ ಚಟುವಟಿಕೆಗಳಲ್ಲಿ 2 ವರ್ಷಗಳ ಕ್ಷೇತ್ರಮಟ್ಟದ ಅನುಭವ ಕಡ್ಡಾಯ ವಾಗಿರುತ್ತದೆ. ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ/ಕೃಷಿ ಸಂಬoಧಿತ ವಿಷಯಗಳಲ್ಲಿ ಪದವಿ/ಸ್ನಾತಕೊತ್ತರ ಪದವಿ ಹಾಗೂ ಕೃಷಿ ಸಂಬoಧಿತ ಚಟುವಟಿಕೆಗಳಲ್ಲಿ 1 ವರ್ಷದ ಕ್ಷೇತ್ರಮಟ್ಟದ ಅನುಭವವನ್ನು ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಪೂರ್ಣ ಮಾಹಿತಿಯೊಂದಿಗೆ ಸೀಲು ಮಾಡಿದ ಲಕೋಟೆಯಲ್ಲಿ ಮುದ್ದಾಂ/ನೊoದಣಿ ಅಂಚೆ ಮೂಲಕ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸಾರ್ವಜನಿಕ ಕಛೇರಿಗಳ ಕಟ್ಟಡದ ಆತ್ಮ ವಿಭಾಗದ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಜುಲೈ 31 ರೊಳಗೆ ಸಲ್ಲಿಸಬೇಕು. ಅರ್ಜಿಗಳೊಂದಿಗೆ ಕಡ್ಡಾಯವಾಗಿ ವಿದ್ಯಾರ್ಹತೆಗೆ ಸಂಬoಧಿಸಿದ ಎಲ್ಲಾ ವರ್ಷದ ಅಂಕಪಟ್ಟಿಗಳು, ಪ್ರಮಾಣಪತ್ರಗಳು, ಕಂಪ್ಯೂಟರ್ ಜ್ಞಾನಕ್ಕೆ ಸಂಬoಧಿಸಿದ ಪ್ರಮಾಣ ಪತ್ರಗಳು, ಅನುಭವಕ್ಕೆ ಸಂಬoಧಿಸಿದ ಪ್ರಮಾಣಪತ್ರಗಳು ಹಾಗೂ ಎಲ್ಲಾ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪ ಯೋಜನಾ ನಿರ್ದೇಶಕರ ಮೊ.ಸಂ: 8088808621 ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ದೂ.ಸಂ: 0821-2442239 ನ್ನು ಸಂಪರ್ಕಿಸಬಹುದು ಎಂದು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago