ಮೈಸೂರು

Mysuru Jobs: ಗುತ್ತಿಗೆ ಆಧಾರದ ನೇಮಕಾತಿ

ಮೈಸೂರು:  2024-25ನೇ ಸಾಲಿಗೆ ಆತ್ಮ ಯೋಜನೆಯಡಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಒಂದು ವರ್ಷದ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ/ಕೃಷಿ ಸಂಬoಧಿತ ವಿಷಯಗಳಲ್ಲಿ ಸ್ನಾತಕೊತ್ತರ ಪದವಿ, ಕಂಪ್ಯೂಟರ್ ಜ್ಞಾನ ಹಾಗೂ ಕೃಷಿ ಸಂಬoಧಿತ ಚಟುವಟಿಕೆಗಳಲ್ಲಿ 2 ವರ್ಷಗಳ ಕ್ಷೇತ್ರಮಟ್ಟದ ಅನುಭವ ಕಡ್ಡಾಯ ವಾಗಿರುತ್ತದೆ. ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ/ಕೃಷಿ ಸಂಬoಧಿತ ವಿಷಯಗಳಲ್ಲಿ ಪದವಿ/ಸ್ನಾತಕೊತ್ತರ ಪದವಿ ಹಾಗೂ ಕೃಷಿ ಸಂಬoಧಿತ ಚಟುವಟಿಕೆಗಳಲ್ಲಿ 1 ವರ್ಷದ ಕ್ಷೇತ್ರಮಟ್ಟದ ಅನುಭವವನ್ನು ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ನಿಗಧಿತ ನಮೂನೆಯಲ್ಲಿ ಪೂರ್ಣ ಮಾಹಿತಿಯೊಂದಿಗೆ ಸೀಲು ಮಾಡಿದ ಲಕೋಟೆಯಲ್ಲಿ ಮುದ್ದಾಂ/ನೊoದಣಿ ಅಂಚೆ ಮೂಲಕ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಸಾರ್ವಜನಿಕ ಕಛೇರಿಗಳ ಕಟ್ಟಡದ ಆತ್ಮ ವಿಭಾಗದ ಜಂಟಿ ಕೃಷಿ ನಿರ್ದೇಶಕರ ಕಛೇರಿಗೆ ಜುಲೈ 31 ರೊಳಗೆ ಸಲ್ಲಿಸಬೇಕು. ಅರ್ಜಿಗಳೊಂದಿಗೆ ಕಡ್ಡಾಯವಾಗಿ ವಿದ್ಯಾರ್ಹತೆಗೆ ಸಂಬoಧಿಸಿದ ಎಲ್ಲಾ ವರ್ಷದ ಅಂಕಪಟ್ಟಿಗಳು, ಪ್ರಮಾಣಪತ್ರಗಳು, ಕಂಪ್ಯೂಟರ್ ಜ್ಞಾನಕ್ಕೆ ಸಂಬoಧಿಸಿದ ಪ್ರಮಾಣ ಪತ್ರಗಳು, ಅನುಭವಕ್ಕೆ ಸಂಬoಧಿಸಿದ ಪ್ರಮಾಣಪತ್ರಗಳು ಹಾಗೂ ಎಲ್ಲಾ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪ ಯೋಜನಾ ನಿರ್ದೇಶಕರ ಮೊ.ಸಂ: 8088808621 ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ದೂ.ಸಂ: 0821-2442239 ನ್ನು ಸಂಪರ್ಕಿಸಬಹುದು ಎಂದು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

7 hours ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

7 hours ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

7 hours ago

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

8 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

9 hours ago