ಮೈಸೂರು

ಮೈಸೂರು | ಚಿತ್ರನಗರಿಯ ಕಾಮಗಾರಿಗೆ ಭೂಮಾಲೀಕ ರೈತರಿಂದ ತಡೆ

ಮೈಸೂರು : ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿಯ ಉದ್ದೇಶಿತ ಚಿತ್ರನಗರಿಯ ಕಾಮಗಾರಿಗೆ ತಡೆಯೊಡ್ಡಿದ ರೈತರು ಅಲ್ಲಿನ ಕೆಲಸವನ್ನು ಸ್ಥಗಿತಗೊಳಿಸಿದರು. ಚಿತ್ರನಗರಿಗಾಗಿ ಭೂಮಿ ಕಳೆದಕೊಂಡ ರೈತರು ತಮಗೆ ನ್ಯಾಯಯುತವಾಗಿ ಬರಬೇಕಾಗಿದ್ದ ಪರಿಹಾರಕ್ಕಾಗಿ ೧೩೫ ದಿನಗಳಿಂದ ನಡಸುತ್ತಿದ್ದ ಶಾಂತಿಯುತ ಪ್ರತಿಭಟನೆಗೆ ಶನಿವಾರ ತಿರುವು ನೀಡಿ, ಅಲ್ಲಿನ ಕಾಮಗಾರಿಗೆ ತಡೆಯೊಡ್ಡಿ ಕೆಲಸ ಸ್ಥಗಿತಗೊಳಿಸಿ ಕಾರ್ಮಿಕರನ್ನು ವಾಪಸ್ ಕಳಿಸಿದರು.

ತಾವು ಕಳೆದಕೊಂಡ ಭೂಮಿಗೆ ಸರ್ಕಾರ ಬಿಡುಗಡೆ ಮಾಡಿದ ೧೮ ಕೋಟಿ ರೂ. ಪರಿಹಾರ ಅಧಿಕಾರಿಗಳ ಚಿತಾವಣೆಯಿಂದಾಗಿ ಅನ್ಯರ ಪಾಲಾಗಿದ್ದು, ತಮಗೆ ಪರಿಹಾರಬೇಕೇ ಬೇಕು ಎಂದು ೧೩೫ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಈ ಪರಿಹಾರದ ವಿತರಣೆಯ ಕುರಿತು ಜಿಲ್ಲಾಧಿಕಾರಿಗಳು ತನಿಖಾ ತಂಡ ರಚಿಸಿ ವಾರದೊಳಗೆ ನ್ಯಾಯ ಕೊಡಿಸುವುದಾಗಿ ಹೇಳಿ ತಿಂಗಳೂ ಕಳೆದರೂ ಪರಿಹಾರ ದೊರಕಿಲ್ಲ, ತನಿಖಾ ಸಮಿತಿಯ ವರದಿಯೂ ಹೊರಬಂದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ರಾಜ್ಯ ರೈತ ಸಂಘದ ನೇತೃತ್ವಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತ ಮುಖಂಡರು, ಶಾಂತ ರೀತಿಯ ಪ್ರತಿಭಟನೆಗೆ ಸರ್ಕಾರ ಹಾಗೂ ಅಧಿಕಾರಿಗಳು ಸ್ಪಂದಿಸಿ ಪರಿಹಾರ ರೂಪಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಅಲ್ಲಿ ನಡೆಯುತ್ತಿದ್ದ ಕಾಂಪೌಂಡ್ ನಿರ್ಮಾಣದ ಕೆಲಸಕ್ಕೆ ಶನಿವಾರ ತಡೆಯೊಡ್ಡಿದರು. ಇದರ ಪರಿಣಾಮ ೩೦ ಕ್ಕೂ ಹೆಚ್ಚು ಕಾರ್ಮಿಕರು ಕಾಮಗಾರಿ ಸ್ಥಗಿತಗೊಳಿಸಿ ವಾಪಸಾದರು. ಈ ಮೂಲಕ ಚಿತ್ರ ನಗರಿಯ ಪರಿಹಾರದ ಪ್ರತಿಭಟನೆ ೧೩೬ನೇ ದಿನ ಇನ್ನೊಂದು ಮಜಲು ತಲುಪಿದಂತಾಗಿದೆ.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶೀ ಪಿ.ಮರಂಕಯ್ಯ, ಪ್ರೇಮರಾಜ್, ಸಂಘದ ಯುವ ಘಟಕದ ಅದ್ಯಕ್ಷ ಶ್ರೀಕಂಠ, ಭೂಮಾಲೀಕರಾದ ಸಂತೋಷ, ಪ್ರಕಾಶ, ಬಸಪ್ಪ, ರಾಜಣ್ಣ, ವೆಂಕಟೇಗೌಡ, ವಾಸು, ಕಳಸಮ್ಮ ಮಂಗಳಮ್ಮ, ಮಂಜುಳ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

2 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

3 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

3 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

4 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

4 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

4 hours ago