ಮೈಸೂರು

ಮೈಸೂರು | ಚಿತ್ರನಗರಿಯ ಕಾಮಗಾರಿಗೆ ಭೂಮಾಲೀಕ ರೈತರಿಂದ ತಡೆ

ಮೈಸೂರು : ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿಯ ಉದ್ದೇಶಿತ ಚಿತ್ರನಗರಿಯ ಕಾಮಗಾರಿಗೆ ತಡೆಯೊಡ್ಡಿದ ರೈತರು ಅಲ್ಲಿನ ಕೆಲಸವನ್ನು ಸ್ಥಗಿತಗೊಳಿಸಿದರು. ಚಿತ್ರನಗರಿಗಾಗಿ ಭೂಮಿ ಕಳೆದಕೊಂಡ ರೈತರು ತಮಗೆ ನ್ಯಾಯಯುತವಾಗಿ ಬರಬೇಕಾಗಿದ್ದ ಪರಿಹಾರಕ್ಕಾಗಿ ೧೩೫ ದಿನಗಳಿಂದ ನಡಸುತ್ತಿದ್ದ ಶಾಂತಿಯುತ ಪ್ರತಿಭಟನೆಗೆ ಶನಿವಾರ ತಿರುವು ನೀಡಿ, ಅಲ್ಲಿನ ಕಾಮಗಾರಿಗೆ ತಡೆಯೊಡ್ಡಿ ಕೆಲಸ ಸ್ಥಗಿತಗೊಳಿಸಿ ಕಾರ್ಮಿಕರನ್ನು ವಾಪಸ್ ಕಳಿಸಿದರು.

ತಾವು ಕಳೆದಕೊಂಡ ಭೂಮಿಗೆ ಸರ್ಕಾರ ಬಿಡುಗಡೆ ಮಾಡಿದ ೧೮ ಕೋಟಿ ರೂ. ಪರಿಹಾರ ಅಧಿಕಾರಿಗಳ ಚಿತಾವಣೆಯಿಂದಾಗಿ ಅನ್ಯರ ಪಾಲಾಗಿದ್ದು, ತಮಗೆ ಪರಿಹಾರಬೇಕೇ ಬೇಕು ಎಂದು ೧೩೫ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಈ ಪರಿಹಾರದ ವಿತರಣೆಯ ಕುರಿತು ಜಿಲ್ಲಾಧಿಕಾರಿಗಳು ತನಿಖಾ ತಂಡ ರಚಿಸಿ ವಾರದೊಳಗೆ ನ್ಯಾಯ ಕೊಡಿಸುವುದಾಗಿ ಹೇಳಿ ತಿಂಗಳೂ ಕಳೆದರೂ ಪರಿಹಾರ ದೊರಕಿಲ್ಲ, ತನಿಖಾ ಸಮಿತಿಯ ವರದಿಯೂ ಹೊರಬಂದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ರಾಜ್ಯ ರೈತ ಸಂಘದ ನೇತೃತ್ವಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತ ಮುಖಂಡರು, ಶಾಂತ ರೀತಿಯ ಪ್ರತಿಭಟನೆಗೆ ಸರ್ಕಾರ ಹಾಗೂ ಅಧಿಕಾರಿಗಳು ಸ್ಪಂದಿಸಿ ಪರಿಹಾರ ರೂಪಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಅಲ್ಲಿ ನಡೆಯುತ್ತಿದ್ದ ಕಾಂಪೌಂಡ್ ನಿರ್ಮಾಣದ ಕೆಲಸಕ್ಕೆ ಶನಿವಾರ ತಡೆಯೊಡ್ಡಿದರು. ಇದರ ಪರಿಣಾಮ ೩೦ ಕ್ಕೂ ಹೆಚ್ಚು ಕಾರ್ಮಿಕರು ಕಾಮಗಾರಿ ಸ್ಥಗಿತಗೊಳಿಸಿ ವಾಪಸಾದರು. ಈ ಮೂಲಕ ಚಿತ್ರ ನಗರಿಯ ಪರಿಹಾರದ ಪ್ರತಿಭಟನೆ ೧೩೬ನೇ ದಿನ ಇನ್ನೊಂದು ಮಜಲು ತಲುಪಿದಂತಾಗಿದೆ.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶೀ ಪಿ.ಮರಂಕಯ್ಯ, ಪ್ರೇಮರಾಜ್, ಸಂಘದ ಯುವ ಘಟಕದ ಅದ್ಯಕ್ಷ ಶ್ರೀಕಂಠ, ಭೂಮಾಲೀಕರಾದ ಸಂತೋಷ, ಪ್ರಕಾಶ, ಬಸಪ್ಪ, ರಾಜಣ್ಣ, ವೆಂಕಟೇಗೌಡ, ವಾಸು, ಕಳಸಮ್ಮ ಮಂಗಳಮ್ಮ, ಮಂಜುಳ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

2 hours ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

22 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

23 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

23 hours ago