ಮೈಸೂರು : ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿಯ ಉದ್ದೇಶಿತ ಚಿತ್ರನಗರಿಯ ಕಾಮಗಾರಿಗೆ ತಡೆಯೊಡ್ಡಿದ ರೈತರು ಅಲ್ಲಿನ ಕೆಲಸವನ್ನು ಸ್ಥಗಿತಗೊಳಿಸಿದರು. ಚಿತ್ರನಗರಿಗಾಗಿ ಭೂಮಿ ಕಳೆದಕೊಂಡ ರೈತರು ತಮಗೆ ನ್ಯಾಯಯುತವಾಗಿ ಬರಬೇಕಾಗಿದ್ದ ಪರಿಹಾರಕ್ಕಾಗಿ ೧೩೫ ದಿನಗಳಿಂದ ನಡಸುತ್ತಿದ್ದ ಶಾಂತಿಯುತ ಪ್ರತಿಭಟನೆಗೆ ಶನಿವಾರ ತಿರುವು ನೀಡಿ, ಅಲ್ಲಿನ ಕಾಮಗಾರಿಗೆ ತಡೆಯೊಡ್ಡಿ ಕೆಲಸ ಸ್ಥಗಿತಗೊಳಿಸಿ ಕಾರ್ಮಿಕರನ್ನು ವಾಪಸ್ ಕಳಿಸಿದರು.
ತಾವು ಕಳೆದಕೊಂಡ ಭೂಮಿಗೆ ಸರ್ಕಾರ ಬಿಡುಗಡೆ ಮಾಡಿದ ೧೮ ಕೋಟಿ ರೂ. ಪರಿಹಾರ ಅಧಿಕಾರಿಗಳ ಚಿತಾವಣೆಯಿಂದಾಗಿ ಅನ್ಯರ ಪಾಲಾಗಿದ್ದು, ತಮಗೆ ಪರಿಹಾರಬೇಕೇ ಬೇಕು ಎಂದು ೧೩೫ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಈ ಪರಿಹಾರದ ವಿತರಣೆಯ ಕುರಿತು ಜಿಲ್ಲಾಧಿಕಾರಿಗಳು ತನಿಖಾ ತಂಡ ರಚಿಸಿ ವಾರದೊಳಗೆ ನ್ಯಾಯ ಕೊಡಿಸುವುದಾಗಿ ಹೇಳಿ ತಿಂಗಳೂ ಕಳೆದರೂ ಪರಿಹಾರ ದೊರಕಿಲ್ಲ, ತನಿಖಾ ಸಮಿತಿಯ ವರದಿಯೂ ಹೊರಬಂದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ರಾಜ್ಯ ರೈತ ಸಂಘದ ನೇತೃತ್ವಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರೈತ ಮುಖಂಡರು, ಶಾಂತ ರೀತಿಯ ಪ್ರತಿಭಟನೆಗೆ ಸರ್ಕಾರ ಹಾಗೂ ಅಧಿಕಾರಿಗಳು ಸ್ಪಂದಿಸಿ ಪರಿಹಾರ ರೂಪಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಅಲ್ಲಿ ನಡೆಯುತ್ತಿದ್ದ ಕಾಂಪೌಂಡ್ ನಿರ್ಮಾಣದ ಕೆಲಸಕ್ಕೆ ಶನಿವಾರ ತಡೆಯೊಡ್ಡಿದರು. ಇದರ ಪರಿಣಾಮ ೩೦ ಕ್ಕೂ ಹೆಚ್ಚು ಕಾರ್ಮಿಕರು ಕಾಮಗಾರಿ ಸ್ಥಗಿತಗೊಳಿಸಿ ವಾಪಸಾದರು. ಈ ಮೂಲಕ ಚಿತ್ರ ನಗರಿಯ ಪರಿಹಾರದ ಪ್ರತಿಭಟನೆ ೧೩೬ನೇ ದಿನ ಇನ್ನೊಂದು ಮಜಲು ತಲುಪಿದಂತಾಗಿದೆ.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶೀ ಪಿ.ಮರಂಕಯ್ಯ, ಪ್ರೇಮರಾಜ್, ಸಂಘದ ಯುವ ಘಟಕದ ಅದ್ಯಕ್ಷ ಶ್ರೀಕಂಠ, ಭೂಮಾಲೀಕರಾದ ಸಂತೋಷ, ಪ್ರಕಾಶ, ಬಸಪ್ಪ, ರಾಜಣ್ಣ, ವೆಂಕಟೇಗೌಡ, ವಾಸು, ಕಳಸಮ್ಮ ಮಂಗಳಮ್ಮ, ಮಂಜುಳ ಸೇರಿದಂತೆ ನೂರಾರು ರೈತರು ಭಾಗಿಯಾಗಿದ್ದರು.
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…
ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…