ಮೈಸೂರು

ಮೈಸೂರು | ಆಕಸ್ಮಿವಾಗಿ ಕಟ್ಟಡದಿಂದ ಕೆಳಗೆ ಬಿದ್ದ ವ್ಯಕ್ತಿ ಸಾವು : ಮತ್ತೋರ್ವ ಗಂಭೀರ

ಮೈಸೂರು : ವಿದ್ಯುತ್ ಸೈನ್ ಬೋರ್ಡ್ ತೆರವುಗೊಳಿಸಲು ಹೋದ ವೇಳೆ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಆತನನ್ನು ರಕ್ಷಿಸಲು ಮುಂದಾದ ಯುವಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಸಂಜೆ ನಗರದಲ್ಲಿ ನಡೆದಿದೆ.

ಹುಣಸೂರು ತಾಲ್ಲೂಕು ನೇರಳಕುಪ್ಪೆ ಗ್ರಾಮದ ನಿವಾಸಿ ವೀರಭದ್ರಶೆಟ್ಟಿ ಎಂಬವರ ಮಗ ಸುನಿಲ್(೨೨) ಎಂಬಾತನೇ ಅವಘಡದಲ್ಲಿ ಮೃತಪಟ್ಟವರು. ನಗರ ಕುಂಬಾರಕೊಪ್ಪಲು ನಿವಾಸಿ ರಾಮು ಎಂಬವರ ಪುತ್ರ ಚಂದ್ರ ಎಂಬಾತ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿದ್ಯುತ್ ಕೆಲಸದ ವೃತ್ತಿಯಲ್ಲಿದ್ದ ಸುನಿಲ್, ಸೋಮವಾರ ಮಧ್ಯಾಹ್ನ ೫ ಗಂಟೆ ವೇಳೆಯಲ್ಲಿ ಜಯಲಕ್ಷ್ಮೀಪುರಂನಲ್ಲಿರುವ ಹೆಬಿಟೇಟ್ ಮಾಲ್‌ನಲ್ಲಿ ವಿದ್ಯುತ್ ಸೈನ್ ಬೋರ್ಡ್ ತೆರವುಗೊಳಿಸುವ ಕಾಮಗಾರಿಗೆಂದು ತೆರಳಿದ್ದರು.
ಕಟ್ಟಡದ ಮೇಲ್ಬಾಗಕ್ಕೆ ಹತ್ತಿದ ಸುನಿಲ್, ಬೋರ್ಡ್ ತೆರವುಗೊಳಿಸುವ ಸಲುವಾಗಿ ಅಲ್ಲಿ ಅಳವಡಿಸಲಾಗಿದ್ದ ಪಿಒಪಿ ಬಾರ್ ಮೇಲೆ ಕಾಲನ್ನು ಇಟ್ಟಿದ್ದಾರೆ. ಸೂಕ್ಷ್ಮವಾಗಿದ್ದ ಅದು ತಕ್ಷಣವೇ ಕುಸಿದಿದೆ. ಇದರಿಂದಾಗಿ ಆಯತಪ್ಪಿದ ಸುನಿಲ್ ಕಟ್ಟಡದಿಂದ ಕೆಳಗೆ ಬಿದ್ದಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಚಲನಚಿತ್ರ ವೀಕ್ಷಿಸಲು ಬಂದಿದ್ದರು
ಘಟನೆಯಲ್ಲಿ ಗಾಯಗೊಂಡ ಚಂದ್ರು ಹೆಬಿಟೇಟ್ ಮಾಲ್‌ನಲ್ಲಿ ಚಲನಚಿತ್ರ ವೀಕ್ಷಿಸಲು ಬಂದಿದ್ದರು. ಪಿಒಪಿ ಮೇಲೆ ಕಾಲಿಟ್ಟು ಕೆಳಗೆ ಬೀಳುತ್ತಿದ್ದ ಸುನಿಲ್‌ನನ್ನು ಹಿಡಿದುಕೊಳ್ಳಲು ಹೋದ ಚಂದ್ರು ಕೂಡ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago