ಮೈಸೂರು

ಮೈಸೂರು | ಆಕಸ್ಮಿವಾಗಿ ಕಟ್ಟಡದಿಂದ ಕೆಳಗೆ ಬಿದ್ದ ವ್ಯಕ್ತಿ ಸಾವು : ಮತ್ತೋರ್ವ ಗಂಭೀರ

ಮೈಸೂರು : ವಿದ್ಯುತ್ ಸೈನ್ ಬೋರ್ಡ್ ತೆರವುಗೊಳಿಸಲು ಹೋದ ವೇಳೆ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಆತನನ್ನು ರಕ್ಷಿಸಲು ಮುಂದಾದ ಯುವಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಸಂಜೆ ನಗರದಲ್ಲಿ ನಡೆದಿದೆ.

ಹುಣಸೂರು ತಾಲ್ಲೂಕು ನೇರಳಕುಪ್ಪೆ ಗ್ರಾಮದ ನಿವಾಸಿ ವೀರಭದ್ರಶೆಟ್ಟಿ ಎಂಬವರ ಮಗ ಸುನಿಲ್(೨೨) ಎಂಬಾತನೇ ಅವಘಡದಲ್ಲಿ ಮೃತಪಟ್ಟವರು. ನಗರ ಕುಂಬಾರಕೊಪ್ಪಲು ನಿವಾಸಿ ರಾಮು ಎಂಬವರ ಪುತ್ರ ಚಂದ್ರ ಎಂಬಾತ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿದ್ಯುತ್ ಕೆಲಸದ ವೃತ್ತಿಯಲ್ಲಿದ್ದ ಸುನಿಲ್, ಸೋಮವಾರ ಮಧ್ಯಾಹ್ನ ೫ ಗಂಟೆ ವೇಳೆಯಲ್ಲಿ ಜಯಲಕ್ಷ್ಮೀಪುರಂನಲ್ಲಿರುವ ಹೆಬಿಟೇಟ್ ಮಾಲ್‌ನಲ್ಲಿ ವಿದ್ಯುತ್ ಸೈನ್ ಬೋರ್ಡ್ ತೆರವುಗೊಳಿಸುವ ಕಾಮಗಾರಿಗೆಂದು ತೆರಳಿದ್ದರು.
ಕಟ್ಟಡದ ಮೇಲ್ಬಾಗಕ್ಕೆ ಹತ್ತಿದ ಸುನಿಲ್, ಬೋರ್ಡ್ ತೆರವುಗೊಳಿಸುವ ಸಲುವಾಗಿ ಅಲ್ಲಿ ಅಳವಡಿಸಲಾಗಿದ್ದ ಪಿಒಪಿ ಬಾರ್ ಮೇಲೆ ಕಾಲನ್ನು ಇಟ್ಟಿದ್ದಾರೆ. ಸೂಕ್ಷ್ಮವಾಗಿದ್ದ ಅದು ತಕ್ಷಣವೇ ಕುಸಿದಿದೆ. ಇದರಿಂದಾಗಿ ಆಯತಪ್ಪಿದ ಸುನಿಲ್ ಕಟ್ಟಡದಿಂದ ಕೆಳಗೆ ಬಿದ್ದಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಚಲನಚಿತ್ರ ವೀಕ್ಷಿಸಲು ಬಂದಿದ್ದರು
ಘಟನೆಯಲ್ಲಿ ಗಾಯಗೊಂಡ ಚಂದ್ರು ಹೆಬಿಟೇಟ್ ಮಾಲ್‌ನಲ್ಲಿ ಚಲನಚಿತ್ರ ವೀಕ್ಷಿಸಲು ಬಂದಿದ್ದರು. ಪಿಒಪಿ ಮೇಲೆ ಕಾಲಿಟ್ಟು ಕೆಳಗೆ ಬೀಳುತ್ತಿದ್ದ ಸುನಿಲ್‌ನನ್ನು ಹಿಡಿದುಕೊಳ್ಳಲು ಹೋದ ಚಂದ್ರು ಕೂಡ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

29 mins ago

ಓದುಗರ ಪತ್ರ: ಮರಗಳ ಹನನ ಏಕೆ?

ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು - ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು…

31 mins ago

ಓದುಗರ ಪತ್ರ: ಎಥೆನಾಲ್: ಪ್ರಚಾರದ ಗಿಮಿಕ್ಕೋ?

ಜೂನ್ ೧೪ರಂದು ಆರಂಭವಾದ ಎಥೆನಾಲ್ ಜಗೃತಿ ಕೇವಲ ಕಾರ್ಪೊರೇಟ್ ಪ್ರಚಾರದ ಗಿಮಿಕ್‌ನಂತೆ ಕಾಣುತ್ತಿದೆ. ಪೆಟ್ರೋಲ್‌ಗೆ ಶೇ.೨೦ ಮಿಶ್ರಣದ ಗುರಿ ಮತ್ತು…

34 mins ago

ಓದುಗರ ಪತ್ರ: ದುಡ್ಡಿಗೆ ಬೆಲೆ ಇಲ್ಲವೇ?

ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ…

36 mins ago

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

13 hours ago