ಮೈಸೂರು

ಮೈಸೂರು: ಸಮಸ್ಯೆ ಹೇಳಿದವನ ಮೇಲೆ ಶಾಸಕರಿಂದ ಹಲ್ಲೆ ಆರೋಪ

ಕೆ.ಆರ್.ನಗರ: ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದ ವೇದಿಕೆಯ ಮೇಲೆ ಕಾರ್ಯಕರ್ತನಿಗೆ ಶಾಸಕ ರವಿಶಂಕರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಾಲ್ಲೂಕಿನ ದೊಡ್ಡೇಕೊಪ್ಪಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲೇ ಇದ್ದ ಕಾಂಗ್ರೆಸ್‌ ಮುಖಂಡ ಮಹದೇವು ಎಂಬುವವರು ಗ್ರಾಮಕ್ಕೆ ಡೈರಿ ಕಟ್ಟಡವನ್ನು ನಿರ್ಮಿಸಿಕೊಡುವಂತೆ ಶಾಸಕರ ಬಳಿ ಮನವಿ ಮಾಡಿದರು.

ಮನವಿಯಿಂದ ಕೆಂಡಾಮಂಡಲರಾದ ಶಾಸಕ ರವಿಶಂಕರ್‌ ಅವರು ಮಹದೇವು ಅವರ ಕಪಾಳಕ್ಕೆ ಹೊಡೆದಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: ದರೋಡೆ ಸ್ಕೆಚ್‌ ರೂಪಿಸಿ ಪತಿ ಮೇಲೆ ಪತ್ನಿ ಹಲ್ಲೆ : ಕೊನೆಗೂ ಸಾವಿಗೀಡಾದ ಪತಿ

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಶಾಸಕ ರವಿಶಂಕರ್‌ ಅವರು, ಆತ ನನಗೆ ಪರಿಚಿತ ಡೈರಿ ವಿಚಾರವಾಗಿ ಕೇಳುತ್ತಿದ್ದ. ಈತನ ಜೊತೆಗೆ ಬೇರೆಯವರು ಮಾತನಾಡುತ್ತಿದ್ದರು. ಸರಿಯಾಗಿ ಯಾರಿಗೆ ಏನೂ ಕೇಳಿಸುತ್ತಿರಲಿಲ್ಲ. ಹೀಗಾಗಿ ಈ ಕಡೆ ಬಾ ಎಂದು ಬೆನ್ನಿಗೆ ತಟ್ಟಿ ಕರೆದೆ. ನಾನು ಯಾವುದೇ ಹಲ್ಲೆ ಮಾಡುವುದಾಗಲಿ, ಆತನಿಗೆ ಹೊಡೆಯುವ ಕೆಲಸ ಮಾಡಿಲ್ಲ. ಈ ಬಗ್ಗೆ ನನ್ನ ವಿರುದ್ದ ಸುಖಾ ಸುಮ್ಮನೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನು ಶಾಸಕರಿಂದ ಕಪಾಳಮೋಕ್ಷ ಮಾಡಿಸಿಕೊಂಡಿದ್ದಾನೆ ಎನ್ನಲಾದ ಕೆ..ಆರ್.ನಗರದ ಮಹದೇವ ಎಂಬುವವರೇ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದು, ಶಾಸಕರು ನನಗೆ ಹೊಡೆದಿಲ್ಲ. ಬೆನ್ನಿಗೆ ತಟ್ಟಿ ಪಕ್ಕಕ್ಕೆ ಕರೆದು ಕೂರಿಸಿದರು. ಅಂದು ಸಭೆಯಲ್ಲಿ ನಾನು ಡೈರಿ ವಿಚಾರವಾಗಿ ಸಮಸ್ಯೆ ಹೇಳುತ್ತಿದ್ದೆ. ಬೇರೆಯವರು ಬೇರೆ ಬೇರೆ ಸಮಸ್ಯೆ ಹೇಳುತ್ತಿದ್ದರು. ಎಲ್ಲವೂ ಗೊಂದಲಮಯವಾಗಿತ್ತು. ನಮ್ಮ ಶಾಸಕರಿಗೆ ಏನೂ ಕೂಡ ಕೇಳಿಸುತ್ತಿರಲಿಲ್ಲ. ನಾನು ಪಕ್ಕದಲ್ಲೇ ನಿಂತಿದ್ದೆ, ಬೆನ್ನು ತಟ್ಟಿ ಪಕ್ಕದಲ್ಲಿ ಕುಳಿತುಕೊಳ್ಳಲು ಹೇಳಿದರು. ಯಾವುದೇ ಹಲ್ಲೆ ಮಾಡಿಲ್ಲ. ಅದು ಸತ್ಯಕ್ಕೆ ದೂರವಾದ ಆರೋಪ. ನನ್ನ ಬೆನ್ನಿಗೆ ತಟ್ಟಿ ಪಕ್ಕಕ್ಕೆ ಕೂರಿಸಿದ್ದನ್ನು ಬಿಟ್ಟರೆ ಯಾವ ಗಲಾಟೆಯೂ ಆಗಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…

8 hours ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…

8 hours ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

11 hours ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

11 hours ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

12 hours ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

12 hours ago