ಮೈಸೂರು

ಮೈಸೂರು: ಸಮಸ್ಯೆ ಹೇಳಿದವನ ಮೇಲೆ ಶಾಸಕರಿಂದ ಹಲ್ಲೆ ಆರೋಪ

ಕೆ.ಆರ್.ನಗರ: ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದ ವೇದಿಕೆಯ ಮೇಲೆ ಕಾರ್ಯಕರ್ತನಿಗೆ ಶಾಸಕ ರವಿಶಂಕರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಾಲ್ಲೂಕಿನ ದೊಡ್ಡೇಕೊಪ್ಪಲು ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲೇ ಇದ್ದ ಕಾಂಗ್ರೆಸ್‌ ಮುಖಂಡ ಮಹದೇವು ಎಂಬುವವರು ಗ್ರಾಮಕ್ಕೆ ಡೈರಿ ಕಟ್ಟಡವನ್ನು ನಿರ್ಮಿಸಿಕೊಡುವಂತೆ ಶಾಸಕರ ಬಳಿ ಮನವಿ ಮಾಡಿದರು.

ಮನವಿಯಿಂದ ಕೆಂಡಾಮಂಡಲರಾದ ಶಾಸಕ ರವಿಶಂಕರ್‌ ಅವರು ಮಹದೇವು ಅವರ ಕಪಾಳಕ್ಕೆ ಹೊಡೆದಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: ದರೋಡೆ ಸ್ಕೆಚ್‌ ರೂಪಿಸಿ ಪತಿ ಮೇಲೆ ಪತ್ನಿ ಹಲ್ಲೆ : ಕೊನೆಗೂ ಸಾವಿಗೀಡಾದ ಪತಿ

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಶಾಸಕ ರವಿಶಂಕರ್‌ ಅವರು, ಆತ ನನಗೆ ಪರಿಚಿತ ಡೈರಿ ವಿಚಾರವಾಗಿ ಕೇಳುತ್ತಿದ್ದ. ಈತನ ಜೊತೆಗೆ ಬೇರೆಯವರು ಮಾತನಾಡುತ್ತಿದ್ದರು. ಸರಿಯಾಗಿ ಯಾರಿಗೆ ಏನೂ ಕೇಳಿಸುತ್ತಿರಲಿಲ್ಲ. ಹೀಗಾಗಿ ಈ ಕಡೆ ಬಾ ಎಂದು ಬೆನ್ನಿಗೆ ತಟ್ಟಿ ಕರೆದೆ. ನಾನು ಯಾವುದೇ ಹಲ್ಲೆ ಮಾಡುವುದಾಗಲಿ, ಆತನಿಗೆ ಹೊಡೆಯುವ ಕೆಲಸ ಮಾಡಿಲ್ಲ. ಈ ಬಗ್ಗೆ ನನ್ನ ವಿರುದ್ದ ಸುಖಾ ಸುಮ್ಮನೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನು ಶಾಸಕರಿಂದ ಕಪಾಳಮೋಕ್ಷ ಮಾಡಿಸಿಕೊಂಡಿದ್ದಾನೆ ಎನ್ನಲಾದ ಕೆ..ಆರ್.ನಗರದ ಮಹದೇವ ಎಂಬುವವರೇ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದು, ಶಾಸಕರು ನನಗೆ ಹೊಡೆದಿಲ್ಲ. ಬೆನ್ನಿಗೆ ತಟ್ಟಿ ಪಕ್ಕಕ್ಕೆ ಕರೆದು ಕೂರಿಸಿದರು. ಅಂದು ಸಭೆಯಲ್ಲಿ ನಾನು ಡೈರಿ ವಿಚಾರವಾಗಿ ಸಮಸ್ಯೆ ಹೇಳುತ್ತಿದ್ದೆ. ಬೇರೆಯವರು ಬೇರೆ ಬೇರೆ ಸಮಸ್ಯೆ ಹೇಳುತ್ತಿದ್ದರು. ಎಲ್ಲವೂ ಗೊಂದಲಮಯವಾಗಿತ್ತು. ನಮ್ಮ ಶಾಸಕರಿಗೆ ಏನೂ ಕೂಡ ಕೇಳಿಸುತ್ತಿರಲಿಲ್ಲ. ನಾನು ಪಕ್ಕದಲ್ಲೇ ನಿಂತಿದ್ದೆ, ಬೆನ್ನು ತಟ್ಟಿ ಪಕ್ಕದಲ್ಲಿ ಕುಳಿತುಕೊಳ್ಳಲು ಹೇಳಿದರು. ಯಾವುದೇ ಹಲ್ಲೆ ಮಾಡಿಲ್ಲ. ಅದು ಸತ್ಯಕ್ಕೆ ದೂರವಾದ ಆರೋಪ. ನನ್ನ ಬೆನ್ನಿಗೆ ತಟ್ಟಿ ಪಕ್ಕಕ್ಕೆ ಕೂರಿಸಿದ್ದನ್ನು ಬಿಟ್ಟರೆ ಯಾವ ಗಲಾಟೆಯೂ ಆಗಿಲ್ಲ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ದರೋಡೆಗೆ ಪ್ರಶಸ್ತವಾಯಿತೇ ಬೈಪಾಸ್?

ಹೇಮಂತ್‌ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…

6 mins ago

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

13 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

13 hours ago

ನೀಟ್‌ ಪರೀಕ್ಷೆ ನಡೆಸುವ ಅಧಿಕಾರ ಆಯಾಯ ರಾಜ್ಯಗಳಿಗೆ ನೀಡಲಿ: ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…

13 hours ago

ಎಬೋಲಾಗೆ 136 ಮಂದಿ ಬಲಿ: WHO ಕಳವಳ

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…

14 hours ago