ಮೈಸೂರು

ಮೈಸೂರು: ಜಾನುವಾರು ರಕ್ಷಣೆ ಹೆಸರಿನಲ್ಲಿ ಹಣ ವಸೂಲಿ: 7 ಮಂದಿ ಆರೋಪಿಗಳ ಬಂಧನ

ಮೈಸೂರು: ಜಾನುವಾರುಗಳ ಸಂರಕ್ಷಣೆ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಗ್ಯಾಂಗ್‌ನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ.

ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಹಾಗೂ ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಹಿಂದೂ ಸಂಘಟನೆ ಹೆಸರಿನಲ್ಲಿ ಜಾನುವಾರುಗಳನ್ನು ರಕ್ಷಣೆ ಮಾಡುವ ನೆಪ ಹೇಳಿ ಜಾನುವಾರು ಸಾಗಿಸುವ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ರತ್ನಪುರಿಯ ಕಿರಣ್‌ ಎಂಬುವವರು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದರು.

ಈ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಖದೀಮರು ಹುಣಸೂರಿನ ಕಟ್ಟೆಮಳಲವಾಡಿ ಬಳಿ ವಾಹನ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀಯಾ? ಎಂದು ಕಿರಣ್‌ನನ್ನು ಬೆದರಿಸಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

25 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ಖದೀಮರು, ಹಣ ಕೊಟ್ಟರೆ ಬಿಡುವುದಾಗಿ ಧಮ್ಕಿ ಹಾಕಿದ್ದರು. ಈ ವೇಳೆ ರಸ್ತೆಯಲ್ಲಿ ಸಾರ್ವಜನಿಕರು ಕೂಡ ಸೇರಿದ್ದು, ಆರೋಪಿಗಳನ್ನು ಪ್ರಶ್ನಿಸಿ ಗೂಸಾ ನೀಡಿದ್ದರು.

ಕಿರಣ್‌ ನೀಡಿದ ದೂರಿನ ಮೇರೆಗೆ ಈಗ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

4 mins ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

36 mins ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

45 mins ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

47 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

52 mins ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

1 hour ago