ಮೈಸೂರು

ಭಾರೀ ಬಿರುಗಾಳಿ ಮಳೆಗೆ ಬುಡ ಸಮೇತ ಉರುಳಿದ ಅರಳಿ ಮರ; 4 ವಾಸದ ಮನೆಗಳು ಜಖಂ!

ವರುಣ : ತಡರಾತ್ರಿ ಸುರಿದ ಭಾರೀ ಬಿರುಗಾಳಿ, ಮಳೆಗೆ ಅರಳಿ ಮರವೊಂದು ಬೇರು ಸಮೇತ ಉರುಳಿದ ಪರಿಣಾಮ ಸಮೀಪದಲ್ಲಿದ್ದ ನಾಲ್ಕು ವಾಸುದ ಮನೆಗಳು ಜಖಂಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು
ತಾಲ್ಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ.

ಸಾಕಷ್ಟು ವರ್ಷಗಳ ಕಾಲದ ಬೃಹತ್ ಅರಳಿ ಮರ ಬಿದ್ದ ಪರಿಣಾಮ ಬಸವನಪುರ ಗ್ರಾಮದ ಸಿದ್ದರಾಜು, ಮೂಗಯ್ಯ, ಮಲ್ಲೇಶ್, ಚೆನ್ನೇಗೌಡ ಎಂಬುವವರ ಮನೆಗಳ ಮೇಲೆ ಉರುಳಿ ಬಿದ್ದಿದ್ದು ಕುಟುಂಬಸ್ಥರು ಮತ್ತು ಜಾನುವಾರುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ವಿದ್ಯುತ್ ಕಂಬಗಳು ನೆಲಕಚ್ಚಿದ್ದು, ಯಾವುದೇ ಅವಘಡ ಸಂಭವಿಸಿಲ್ಲ. ಸ್ಥಳಕ್ಕೆ ನಂಜನಗೂಡಿನ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ದೇವರಾಜಯ್ಯ ನೇತೃತ್ವದಲ್ಲಿ ಸಿಬ್ಬಂದಿಗಳು ಧಾವಿಸಿ ಮುರಿದು ಬಿದ್ದಿದ್ದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿದ್ದಾರೆ. ಹಾನಿಯಾಗಿರುವ ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಜಿಲ್ಲಾ ಮತ್ತು ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ತಡ ರಾತ್ರಿ ನಂಜನಗೂಡು ತಾಲೂಕಿನ ಹಲವು ಕಡೆ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯ ರಭಸಕ್ಕೆ ಬಸವನಪುರ ಗ್ರಾಮದಲ್ಲಿ ಸಾಕಷ್ಟು ವರ್ಷಗಳ ಹಳೆಯ ಕಾಲದ ಅರಳಿ ಮರ ಬುಡ ಸಮೇತ ಕುಸಿಯಿತು. ಮನೆಯಲ್ಲಿ ಕುಟುಂಬಸ್ಥರು ಜೊತೆಗೆ ಜಾನುವಾರುಗಳಿದ್ದರೂ ಸದ್ಯ ಯಾವುದೇ ಅಪಾಯ ಸಂಭವಿಸಿಲ್ಲ. ವಿದ್ಯುತ್ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿ ಎಲ್ಲವನ್ನು ಸರಿಪಡಿಸಲು ಮುಂದಾಗಿದ್ದಾರೆ. ಗ್ರಾಮ ಲೆಕ್ಕಾಧಿಕಾರಿ ಮತ್ತು ರೆವಿನ್ಯೂ ಅಧಿಕಾರಿಗಳ ಜೊತೆ ಸ್ಥಳಕ್ಕೆ ನಾನು ಭೇಟಿ ನೀಡುತ್ತೇನೆ ಹಾನಿಗೊಳಗಾದ ವಾಸದ ಮನೆಗಳಿಗೆ ಪರಿಹಾರ ನೀಡಲು ಮುಂದಾಗುತ್ತೇವೆ ಎಂದು ತಿಳಿಸಿದರು.

ಇನ್ನು ಚೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ದೇವರಾಜಯ್ಯ ಬಸವನಪುರ ಗ್ರಾಮದಲ್ಲಿ ತಡರಾತ್ರಿ ಸುರಿದ ಮಳೆ ಮತ್ತು ಗಾಳಿಯ ರಭಸಕ್ಕೆ ನಾಲ್ಕೈದು ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ ಈಗ ನಮ್ಮ ಇಲಾಖೆ ಸಿಬ್ಬಂದಿಗಳ ಜೊತೆಗೂಡಿ ಎಲ್ಲವನ್ನು ಸರಿಪಡಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಶ್ರೀಧರ್ ಆರ್ ಭಟ್

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವನಾದ ನಾನು ನಂಜನಗೂಡು ನಗರದಲ್ಲಿ ವಾಸವಾಗಿದ್ದು 1982ರ ಮಾರ್ಚ್ ತಿಂಗಳಿಂದ‌, 42 ವರ್ಷಗಳಿಂದ ಆಂದೋಲನ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮೊಬೈಲ್‌ ಸಂಖ್ಯೆ: 9448425325

Recent Posts

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ :‌ ದರ ಏರಿಕೆ ಸ್ಥಗಿತ

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರಗಳಲ್ಲಿ ಫೆಬ್ರವರಿ 9ರಿಂದ ಯೋಜಿಸಲಾಗಿದ್ದ ಸುಮಾರು 5% ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರು…

20 mins ago

ಮುಂಬೈ ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಬಿಜೆಪಿಯ ರಿತು ತಾವ್ಡೆ ಆಯ್ಕೆ

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್‌ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…

2 hours ago

ಸಿಎಂ ಆಗುವ ಆಸೆ ಎಲ್ಲರಿಗೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…

2 hours ago

ಪಿರಿಯಾಪಟ್ಟಣ| ವಿದ್ಯುತ್‌ ಸ್ಪರ್ಶ: ಕಾಡಾನೆ ಸಾವು

ಪಿರಿಯಾಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್‌ ಟೆಂಪಲ್‌ ಸಮೀಪದ ದೊಡ್ಡ ಹರವೆ ಕಾಲೋನಿ…

3 hours ago

ಹನೂರು| ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಉಳಿಸಿ, ವಿಬಿ.ಜಿ ರಾಮ್ ಜಿ ಅಳಿಸಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…

3 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ಸಿದ್ಧತೆ: ಬಸವನಕಡ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ನೇತೃತ್ವದ ತಂಡ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…

3 hours ago