ಮೈಸೂರು

ಭಾರೀ ಬಿರುಗಾಳಿ ಮಳೆಗೆ ಬುಡ ಸಮೇತ ಉರುಳಿದ ಅರಳಿ ಮರ; 4 ವಾಸದ ಮನೆಗಳು ಜಖಂ!

ವರುಣ : ತಡರಾತ್ರಿ ಸುರಿದ ಭಾರೀ ಬಿರುಗಾಳಿ, ಮಳೆಗೆ ಅರಳಿ ಮರವೊಂದು ಬೇರು ಸಮೇತ ಉರುಳಿದ ಪರಿಣಾಮ ಸಮೀಪದಲ್ಲಿದ್ದ ನಾಲ್ಕು ವಾಸುದ ಮನೆಗಳು ಜಖಂಗೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು
ತಾಲ್ಲೂಕಿನ ಬಸವನಪುರ ಗ್ರಾಮದಲ್ಲಿ ನಡೆದಿದೆ.

ಸಾಕಷ್ಟು ವರ್ಷಗಳ ಕಾಲದ ಬೃಹತ್ ಅರಳಿ ಮರ ಬಿದ್ದ ಪರಿಣಾಮ ಬಸವನಪುರ ಗ್ರಾಮದ ಸಿದ್ದರಾಜು, ಮೂಗಯ್ಯ, ಮಲ್ಲೇಶ್, ಚೆನ್ನೇಗೌಡ ಎಂಬುವವರ ಮನೆಗಳ ಮೇಲೆ ಉರುಳಿ ಬಿದ್ದಿದ್ದು ಕುಟುಂಬಸ್ಥರು ಮತ್ತು ಜಾನುವಾರುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ವಿದ್ಯುತ್ ಕಂಬಗಳು ನೆಲಕಚ್ಚಿದ್ದು, ಯಾವುದೇ ಅವಘಡ ಸಂಭವಿಸಿಲ್ಲ. ಸ್ಥಳಕ್ಕೆ ನಂಜನಗೂಡಿನ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ದೇವರಾಜಯ್ಯ ನೇತೃತ್ವದಲ್ಲಿ ಸಿಬ್ಬಂದಿಗಳು ಧಾವಿಸಿ ಮುರಿದು ಬಿದ್ದಿದ್ದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿದ್ದಾರೆ. ಹಾನಿಯಾಗಿರುವ ಮನೆಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಜಿಲ್ಲಾ ಮತ್ತು ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ತಡ ರಾತ್ರಿ ನಂಜನಗೂಡು ತಾಲೂಕಿನ ಹಲವು ಕಡೆ ಸುರಿದ ಭಾರಿ ಮಳೆ ಮತ್ತು ಬಿರುಗಾಳಿಯ ರಭಸಕ್ಕೆ ಬಸವನಪುರ ಗ್ರಾಮದಲ್ಲಿ ಸಾಕಷ್ಟು ವರ್ಷಗಳ ಹಳೆಯ ಕಾಲದ ಅರಳಿ ಮರ ಬುಡ ಸಮೇತ ಕುಸಿಯಿತು. ಮನೆಯಲ್ಲಿ ಕುಟುಂಬಸ್ಥರು ಜೊತೆಗೆ ಜಾನುವಾರುಗಳಿದ್ದರೂ ಸದ್ಯ ಯಾವುದೇ ಅಪಾಯ ಸಂಭವಿಸಿಲ್ಲ. ವಿದ್ಯುತ್ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿ ಎಲ್ಲವನ್ನು ಸರಿಪಡಿಸಲು ಮುಂದಾಗಿದ್ದಾರೆ. ಗ್ರಾಮ ಲೆಕ್ಕಾಧಿಕಾರಿ ಮತ್ತು ರೆವಿನ್ಯೂ ಅಧಿಕಾರಿಗಳ ಜೊತೆ ಸ್ಥಳಕ್ಕೆ ನಾನು ಭೇಟಿ ನೀಡುತ್ತೇನೆ ಹಾನಿಗೊಳಗಾದ ವಾಸದ ಮನೆಗಳಿಗೆ ಪರಿಹಾರ ನೀಡಲು ಮುಂದಾಗುತ್ತೇವೆ ಎಂದು ತಿಳಿಸಿದರು.

ಇನ್ನು ಚೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ದೇವರಾಜಯ್ಯ ಬಸವನಪುರ ಗ್ರಾಮದಲ್ಲಿ ತಡರಾತ್ರಿ ಸುರಿದ ಮಳೆ ಮತ್ತು ಗಾಳಿಯ ರಭಸಕ್ಕೆ ನಾಲ್ಕೈದು ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ ಈಗ ನಮ್ಮ ಇಲಾಖೆ ಸಿಬ್ಬಂದಿಗಳ ಜೊತೆಗೂಡಿ ಎಲ್ಲವನ್ನು ಸರಿಪಡಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಶ್ರೀಧರ್ ಆರ್ ಭಟ್

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವನಾದ ನಾನು ನಂಜನಗೂಡು ನಗರದಲ್ಲಿ ವಾಸವಾಗಿದ್ದು 1982ರ ಮಾರ್ಚ್ ತಿಂಗಳಿಂದ‌, 42 ವರ್ಷಗಳಿಂದ ಆಂದೋಲನ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮೊಬೈಲ್‌ ಸಂಖ್ಯೆ: 9448425325

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

8 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

14 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago