ಮೈಸೂರು

ಮೈಸೂರು ರಂಗಾಯಣ | ಜೂ.29 ರಿಂದ ಸಿಜಿಕೆ ನೆನಪಿನ ಗ್ರೀಷ್ಮ ರಂಗೋತ್ಸವ

ಮೈಸೂರು : ಪ್ರತಿಬಾರಿಯಂತೆ ಈ ಬಾರಿಯೂ ರಂಗಾಯಣವು ಸಿಜಿಕೆ ನೆನಪಿನಲ್ಲಿ ಹವ್ಯಾಸಿ ರಂಗತಂಡಗಳನ್ನು ಆಹ್ವಾನಿಸಿ ‘ಗ್ರೀಷ್ಮ ರಂಗೋತ್ಸವ-25’ ಅನ್ನು ಆಯೋಜಿಸುತ್ತಿದೆ ಎಂದು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ತಿಳಿಸಿದರು.

ರಂಗಾಯಣದ ಬಿ.ವಿ.ಕಾರಂತ ರಂಗ ಚಾವಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜೂ.೨೯ರಂದು ಸಂಜೆ ೬ ಗಂಟೆಗೆ ಭೂಮಿಗೀತ ರಂಗಮಂದಿರದಲ್ಲಿ ಏರ್ಪಡಿಸಿರುವ ಗ್ರೀಷ್ಮ ರಂಗೋತ್ಸವವನ್ನು ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ (ಜನ್ನಿ) ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್, ರಂಗಸಮಾಜದ ಸದಸ್ಯ ಎಚ್.ಎಸ್.ಸುರೇಶ್‌ಬಾಬು ಹಾಜರಲಿದ್ದಾರೆ. ಜೂ.೨೯ರಿಂದ ಆ.೧೦ರವರೆಗೆ ಪ್ರತಿ ಭಾನುವಾರ ಹವ್ಯಾಸಿ ಕಲಾತಂಡದಿಂದ ಒಂದೊಂದು ನಾಟಕ ಪ್ರದರ್ಶನ ಇರಲಿದೆ,” ಎಂದು ತಿಳಿಸಿದರು.

“ರಂಗಾಯಣ ಹಾಗೂ ಹವ್ಯಾಸಿ ರಂಗತಂಡಗಳ ಬೆಸುಗೆಯಾಗಿ ಗ್ರೀಷ್ಮ ರಂಗೋತ್ಸವ ಪ್ರತಿವರ್ಷ ನಡೆದುಕೊಂಡು ಬರುತ್ತಿದೆ. ಮೈಸೂರು, ಮಂಡ್ಯ ಹಾಗೂ ಕೇರಳ ಸೇರಿದಂತೆ ಒಟ್ಟು ಏಳು ನಾಟಕಗಳು ಪ್ರದರ್ಶನ ಕಾಣಲಿದ್ದು, ಕುವೆಂಪು ಅವರ ರಚನೆಯ ಮಂಜುನಾಥ್ ಭ್ಯಾಟೆ ನಿರ್ದೇಶನದ ನೇಪಥ್ಯ ರಂಗತಂಡ ಪ್ರಸ್ತುತಪಡಿಸುವ ‘ಸ್ಮಶಾನ ಕುರುಕ್ಷೇತ್ರ’ ನಾಟಕದ ಮೂಲಕ ಗ್ರೀಷ್ಮ ರಂಗೋತ್ಸವಕ್ಕೆ ಚಾಲನೆ ಸಿಗಲಿದೆ,” ಎಂದು ತಿಳಿಸಿದರು.

ರಂಗಸಮಾಜದ ಸದಸ್ಯ ಎಚ್.ಎಸ್.ಸುರೇಶ್ ಬಾಬು, ಗ್ರೀಷ್ಮ ರಂಗೋತ್ಸವ -೨೦೨೫ರ ಸಂಚಾಲಕ ಅರಸೀಕೆರೆ ಯೋಗಾನಂದ ಇದ್ದರು.

ದಿನಾಂಕ ನಾಟಕ/ತಂಡ ನಿರ್ದೇಶನ

ಜೂ.೨೯ ಸ್ಮಶಾನ ಕುರುಕ್ಷೇತ್ರ ಮಂಜುನಾಥ್ ಭ್ಯಾಟೆ
ನೇಪಥ್ಯ ರಂಗತಂಡ

ಜು.೬ ವಾರ್ಡ್ ನಂ.೦೬ ಮೈಮ್ ರಮೇಶ್
ಜಿಪಿಐಇಆರ್, ಮೈಸೂರು

ಜು.೧೩ ಅಹಲ್ಯ ಬಿ.ಡಿ. ಯತೀಶ್ ಎನ್.ಕೊಳ್ಳೆಗಾಲ
ವರ್ಕ್‌ಶಾಪ್ ಇನ್ ಮೈಸೂರು ಫಾರ್ ಥಿಯೇಟರ್

ಜು.೨೦ ಪರಮೇಶಿ ಪ್ರೇಮ ಪ್ರಸಂಗ ರವಿಪ್ರಸಾದ್
ರಂಗವಲ್ಲಿ, ಮೈಸೂರು

ಜು.೨೭ ಕಳಸೂತ್ರ ಎಚ್.ಎಸ್.ಸುರೇಶ್‌ಬಾಬು
ಅಭಿಯಂತರರು

ಆ.೩ ನಿತ್ಯ ಸಚಿವ ಪ್ರಮೋದ್ ಶಿಗ್ಗಾಂವ್
ಕರ್ನಾಟಕ ಸಂಘ ಮಂಡ್ಯ

ಆ.೧೦ ಕುಹೂ (ಮಲಯಾಳಂ) ಅರುಣ್‌ಲಾಲ್
ಲಿಟಲ್ ಅರ್ಥ್ ಸ್ಕೂಲ್ ಆಫ್ ಥಿಯೇಟರ್, ಕೇರಳ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

23 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

26 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

40 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

46 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

4 hours ago