ಮೈಸೂರು

ಮೈಸೂರು ರಂಗಾಯಣ | ಜೂ.29 ರಿಂದ ಸಿಜಿಕೆ ನೆನಪಿನ ಗ್ರೀಷ್ಮ ರಂಗೋತ್ಸವ

ಮೈಸೂರು : ಪ್ರತಿಬಾರಿಯಂತೆ ಈ ಬಾರಿಯೂ ರಂಗಾಯಣವು ಸಿಜಿಕೆ ನೆನಪಿನಲ್ಲಿ ಹವ್ಯಾಸಿ ರಂಗತಂಡಗಳನ್ನು ಆಹ್ವಾನಿಸಿ ‘ಗ್ರೀಷ್ಮ ರಂಗೋತ್ಸವ-25’ ಅನ್ನು ಆಯೋಜಿಸುತ್ತಿದೆ ಎಂದು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ತಿಳಿಸಿದರು.

ರಂಗಾಯಣದ ಬಿ.ವಿ.ಕಾರಂತ ರಂಗ ಚಾವಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜೂ.೨೯ರಂದು ಸಂಜೆ ೬ ಗಂಟೆಗೆ ಭೂಮಿಗೀತ ರಂಗಮಂದಿರದಲ್ಲಿ ಏರ್ಪಡಿಸಿರುವ ಗ್ರೀಷ್ಮ ರಂಗೋತ್ಸವವನ್ನು ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ (ಜನ್ನಿ) ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್, ರಂಗಸಮಾಜದ ಸದಸ್ಯ ಎಚ್.ಎಸ್.ಸುರೇಶ್‌ಬಾಬು ಹಾಜರಲಿದ್ದಾರೆ. ಜೂ.೨೯ರಿಂದ ಆ.೧೦ರವರೆಗೆ ಪ್ರತಿ ಭಾನುವಾರ ಹವ್ಯಾಸಿ ಕಲಾತಂಡದಿಂದ ಒಂದೊಂದು ನಾಟಕ ಪ್ರದರ್ಶನ ಇರಲಿದೆ,” ಎಂದು ತಿಳಿಸಿದರು.

“ರಂಗಾಯಣ ಹಾಗೂ ಹವ್ಯಾಸಿ ರಂಗತಂಡಗಳ ಬೆಸುಗೆಯಾಗಿ ಗ್ರೀಷ್ಮ ರಂಗೋತ್ಸವ ಪ್ರತಿವರ್ಷ ನಡೆದುಕೊಂಡು ಬರುತ್ತಿದೆ. ಮೈಸೂರು, ಮಂಡ್ಯ ಹಾಗೂ ಕೇರಳ ಸೇರಿದಂತೆ ಒಟ್ಟು ಏಳು ನಾಟಕಗಳು ಪ್ರದರ್ಶನ ಕಾಣಲಿದ್ದು, ಕುವೆಂಪು ಅವರ ರಚನೆಯ ಮಂಜುನಾಥ್ ಭ್ಯಾಟೆ ನಿರ್ದೇಶನದ ನೇಪಥ್ಯ ರಂಗತಂಡ ಪ್ರಸ್ತುತಪಡಿಸುವ ‘ಸ್ಮಶಾನ ಕುರುಕ್ಷೇತ್ರ’ ನಾಟಕದ ಮೂಲಕ ಗ್ರೀಷ್ಮ ರಂಗೋತ್ಸವಕ್ಕೆ ಚಾಲನೆ ಸಿಗಲಿದೆ,” ಎಂದು ತಿಳಿಸಿದರು.

ರಂಗಸಮಾಜದ ಸದಸ್ಯ ಎಚ್.ಎಸ್.ಸುರೇಶ್ ಬಾಬು, ಗ್ರೀಷ್ಮ ರಂಗೋತ್ಸವ -೨೦೨೫ರ ಸಂಚಾಲಕ ಅರಸೀಕೆರೆ ಯೋಗಾನಂದ ಇದ್ದರು.

ದಿನಾಂಕ ನಾಟಕ/ತಂಡ ನಿರ್ದೇಶನ

ಜೂ.೨೯ ಸ್ಮಶಾನ ಕುರುಕ್ಷೇತ್ರ ಮಂಜುನಾಥ್ ಭ್ಯಾಟೆ
ನೇಪಥ್ಯ ರಂಗತಂಡ

ಜು.೬ ವಾರ್ಡ್ ನಂ.೦೬ ಮೈಮ್ ರಮೇಶ್
ಜಿಪಿಐಇಆರ್, ಮೈಸೂರು

ಜು.೧೩ ಅಹಲ್ಯ ಬಿ.ಡಿ. ಯತೀಶ್ ಎನ್.ಕೊಳ್ಳೆಗಾಲ
ವರ್ಕ್‌ಶಾಪ್ ಇನ್ ಮೈಸೂರು ಫಾರ್ ಥಿಯೇಟರ್

ಜು.೨೦ ಪರಮೇಶಿ ಪ್ರೇಮ ಪ್ರಸಂಗ ರವಿಪ್ರಸಾದ್
ರಂಗವಲ್ಲಿ, ಮೈಸೂರು

ಜು.೨೭ ಕಳಸೂತ್ರ ಎಚ್.ಎಸ್.ಸುರೇಶ್‌ಬಾಬು
ಅಭಿಯಂತರರು

ಆ.೩ ನಿತ್ಯ ಸಚಿವ ಪ್ರಮೋದ್ ಶಿಗ್ಗಾಂವ್
ಕರ್ನಾಟಕ ಸಂಘ ಮಂಡ್ಯ

ಆ.೧೦ ಕುಹೂ (ಮಲಯಾಳಂ) ಅರುಣ್‌ಲಾಲ್
ಲಿಟಲ್ ಅರ್ಥ್ ಸ್ಕೂಲ್ ಆಫ್ ಥಿಯೇಟರ್, ಕೇರಳ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

11 hours ago