ಮೈಸೂರು

ಮೈಸೂರು ರಂಗಾಯಣ | ಜೂ.29 ರಿಂದ ಸಿಜಿಕೆ ನೆನಪಿನ ಗ್ರೀಷ್ಮ ರಂಗೋತ್ಸವ

ಮೈಸೂರು : ಪ್ರತಿಬಾರಿಯಂತೆ ಈ ಬಾರಿಯೂ ರಂಗಾಯಣವು ಸಿಜಿಕೆ ನೆನಪಿನಲ್ಲಿ ಹವ್ಯಾಸಿ ರಂಗತಂಡಗಳನ್ನು ಆಹ್ವಾನಿಸಿ ‘ಗ್ರೀಷ್ಮ ರಂಗೋತ್ಸವ-25’ ಅನ್ನು ಆಯೋಜಿಸುತ್ತಿದೆ ಎಂದು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ತಿಳಿಸಿದರು.

ರಂಗಾಯಣದ ಬಿ.ವಿ.ಕಾರಂತ ರಂಗ ಚಾವಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜೂ.೨೯ರಂದು ಸಂಜೆ ೬ ಗಂಟೆಗೆ ಭೂಮಿಗೀತ ರಂಗಮಂದಿರದಲ್ಲಿ ಏರ್ಪಡಿಸಿರುವ ಗ್ರೀಷ್ಮ ರಂಗೋತ್ಸವವನ್ನು ರಂಗಾಯಣದ ಮಾಜಿ ನಿರ್ದೇಶಕ ಎಚ್.ಜನಾರ್ಧನ್ (ಜನ್ನಿ) ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್, ರಂಗಸಮಾಜದ ಸದಸ್ಯ ಎಚ್.ಎಸ್.ಸುರೇಶ್‌ಬಾಬು ಹಾಜರಲಿದ್ದಾರೆ. ಜೂ.೨೯ರಿಂದ ಆ.೧೦ರವರೆಗೆ ಪ್ರತಿ ಭಾನುವಾರ ಹವ್ಯಾಸಿ ಕಲಾತಂಡದಿಂದ ಒಂದೊಂದು ನಾಟಕ ಪ್ರದರ್ಶನ ಇರಲಿದೆ,” ಎಂದು ತಿಳಿಸಿದರು.

“ರಂಗಾಯಣ ಹಾಗೂ ಹವ್ಯಾಸಿ ರಂಗತಂಡಗಳ ಬೆಸುಗೆಯಾಗಿ ಗ್ರೀಷ್ಮ ರಂಗೋತ್ಸವ ಪ್ರತಿವರ್ಷ ನಡೆದುಕೊಂಡು ಬರುತ್ತಿದೆ. ಮೈಸೂರು, ಮಂಡ್ಯ ಹಾಗೂ ಕೇರಳ ಸೇರಿದಂತೆ ಒಟ್ಟು ಏಳು ನಾಟಕಗಳು ಪ್ರದರ್ಶನ ಕಾಣಲಿದ್ದು, ಕುವೆಂಪು ಅವರ ರಚನೆಯ ಮಂಜುನಾಥ್ ಭ್ಯಾಟೆ ನಿರ್ದೇಶನದ ನೇಪಥ್ಯ ರಂಗತಂಡ ಪ್ರಸ್ತುತಪಡಿಸುವ ‘ಸ್ಮಶಾನ ಕುರುಕ್ಷೇತ್ರ’ ನಾಟಕದ ಮೂಲಕ ಗ್ರೀಷ್ಮ ರಂಗೋತ್ಸವಕ್ಕೆ ಚಾಲನೆ ಸಿಗಲಿದೆ,” ಎಂದು ತಿಳಿಸಿದರು.

ರಂಗಸಮಾಜದ ಸದಸ್ಯ ಎಚ್.ಎಸ್.ಸುರೇಶ್ ಬಾಬು, ಗ್ರೀಷ್ಮ ರಂಗೋತ್ಸವ -೨೦೨೫ರ ಸಂಚಾಲಕ ಅರಸೀಕೆರೆ ಯೋಗಾನಂದ ಇದ್ದರು.

ದಿನಾಂಕ ನಾಟಕ/ತಂಡ ನಿರ್ದೇಶನ

ಜೂ.೨೯ ಸ್ಮಶಾನ ಕುರುಕ್ಷೇತ್ರ ಮಂಜುನಾಥ್ ಭ್ಯಾಟೆ
ನೇಪಥ್ಯ ರಂಗತಂಡ

ಜು.೬ ವಾರ್ಡ್ ನಂ.೦೬ ಮೈಮ್ ರಮೇಶ್
ಜಿಪಿಐಇಆರ್, ಮೈಸೂರು

ಜು.೧೩ ಅಹಲ್ಯ ಬಿ.ಡಿ. ಯತೀಶ್ ಎನ್.ಕೊಳ್ಳೆಗಾಲ
ವರ್ಕ್‌ಶಾಪ್ ಇನ್ ಮೈಸೂರು ಫಾರ್ ಥಿಯೇಟರ್

ಜು.೨೦ ಪರಮೇಶಿ ಪ್ರೇಮ ಪ್ರಸಂಗ ರವಿಪ್ರಸಾದ್
ರಂಗವಲ್ಲಿ, ಮೈಸೂರು

ಜು.೨೭ ಕಳಸೂತ್ರ ಎಚ್.ಎಸ್.ಸುರೇಶ್‌ಬಾಬು
ಅಭಿಯಂತರರು

ಆ.೩ ನಿತ್ಯ ಸಚಿವ ಪ್ರಮೋದ್ ಶಿಗ್ಗಾಂವ್
ಕರ್ನಾಟಕ ಸಂಘ ಮಂಡ್ಯ

ಆ.೧೦ ಕುಹೂ (ಮಲಯಾಳಂ) ಅರುಣ್‌ಲಾಲ್
ಲಿಟಲ್ ಅರ್ಥ್ ಸ್ಕೂಲ್ ಆಫ್ ಥಿಯೇಟರ್, ಕೇರಳ

ಆಂದೋಲನ ಡೆಸ್ಕ್

Recent Posts

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

1 hour ago

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

2 hours ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

3 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

4 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

5 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

6 hours ago