ಮೈಸೂರು

ಮೈಸೂರು | ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿ

ಮೈಸೂರು : ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿಯನ್ನು ಹೊಂದಲಾಗಿದೆ ಎಂದು ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹೇಳಿದರು.‌

ವಿಶ್ವೇಶ್ವರನಗರದ ಬಿಲ್ಡರ‍್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ನಗರಪಾಲಿಕೆ ವಲಯ ಕಚೇರಿ-2ರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಜಿದಾರರಿಗೆ ಇ-ಖಾತೆ ವಿತರಿಸಿ ಮಾತನಾಡಿದ ಅವರು,
ಪಾಲಿಕೆ ವತಿಯಿಂದ ಈಗಾಗಲೇ 52,658 ಇ-ಖಾತೆಗಳನ್ನು ವಿತರಿಸಲಾಗಿದೆ. ವರ್ಷಾಂತ್ಯಕ್ಕೆ 1 ಲಕ್ಷ ಇ-ಖಾತೆ ವಿತರಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.

ಪ್ರತಿ ಶುಕ್ರವಾರ ಎಲ್ಲ ವಲಯ ಕಚೇರಿಗಳಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ಜನಸ್ಪಂದನ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ನಗರಪಾಲಿಕೆಯ ಒಂಬತ್ತು ವಲಯ ಕಚೇರಿಗಳಲ್ಲಿ ಇ-ಖಾತೆ ವಿತರಿಸಲಾಗುತ್ತಿದೆ. ಸಾರ್ವಜನಿಕರು ಅರ್ಜಿ ಸಲ್ಲಿಸುವಾಗ ಪೂರ್ಣ ದಾಖಲೆಗಳನ್ನು ಸಲ್ಲಿಸಬೇಕು. ಮಧ್ಯವರ್ತಿಯ ಮೊರೆ ಹೋಗಬಾರದು ಎಂದು ಹೇಳಿದರು.

ಉಪ ಆಯುಕ್ತ ಜಿ.ಎಸ್.ಸೋಮಶೇಖರ್, ವಲಯ ಆಯುಕ್ತ ಗಿರೀಶ್, ಪರಿಸರ ಅಭಿಯಂತರರಾದ ಮಹದೇವಮ್ಮ, ವೆಂಕಟೇಶ್, ಕಂದಾಯ ಅಽಕಾರಿ ಬೆಟ್ಟಸ್ವಾಮಯ್ಯ, ಸಹಾಯಕ ಕಂದಾಯಾಽಕಾರಿ, ಕಂದಾಯ ನಿರೀಕ್ಷಕರು, ಆರೋಗ್ಯ ನಿರೀಕ್ಷಕರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

6 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

6 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

7 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

7 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

7 hours ago