ಮೈಸೂರು: ತಂಗಿಯ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಸಾಮಗ್ರಿ ತರಲು ತೆರಳಿದ ಯುವಕ ರಸ್ತೆ ಕಾಮಗಾರಿ ನಡೆಯುತ್ತಿದ್ದ ಭಾರಿ ಹಳ್ಳಕ್ಕೆ ಬಿದ್ದು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೆಡಿಯಾಲದ ವೀರಭದ್ರಸ್ವಾಮಿ ಘಟನೆಯಲ್ಲಿ ಗಾಯಗೊಂಡ ಯುವಕ. ತೀವ್ರ ಗಾಯಗೊಂಡಿರುವ ವೀರಭದ್ರಸ್ವಾಮಿಯನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತಂಗಿ ನಿಶ್ಚಿತಾರ್ಥ ಹಿನ್ನಲೆ ಸಾಮಗ್ರಿ ತರಲು ಹುಲ್ಲಹಳ್ಳಿಗೆ ಹೋಗುವ ವೇಳೆ, ಮಾದಾಪುರ ಹಾಗೂ ಕಾರ್ಯ ಗ್ರಾಮದ ನಡುವಿನ ರಾಜ್ಯ ಹೆದ್ದಾರಿಯಲ್ಲಿ ಡೆಕ್ ಕಾಮಗಾರಿ ನಡೆಯುತ್ತಿದ್ದ ಹಳ್ಳಕ್ಕೆ ಉರುಳಿ ಬಿದ್ದು ಕೋಮಾ ಸ್ಥಿತಿ ತಲುಪಿದ್ದಾನೆ.
ಭಾರಿ ಪ್ರಮಾಣದ ಹಳ್ಳ ತೆಗೆಯುವ ವೇಳೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಈ ಘಟನೆ ನಡೆದಿದೆ ಎಂದು ವೀರಭದ್ರಸ್ವಾಮಿ ತಂದೆ ಬಸವಲಿಂಗಪ್ಪರವರು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಹಿನ್ನಲೆ ಕಾಮಗಾರಿ ನಡೆಸುವ ವೇಳೆ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದ ಗುತ್ತಿಗೆದಾರ ಗೋವಿಂದೇಗೌಡ ವಿರುದ್ದ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…