ಮೈಸೂರು: ತನಗೆ ಆಶ್ರಯ ನೀಡಿದ್ದ ಮನೆಯಲ್ಲೇ ಕಳ್ಳತನ ಮಾಡಲು ಯತ್ನಿಸಿ ಸಿಕ್ಕಿ ಬೀಳುವ ಭಯದಲ್ಲಿ ಮಹಡಿ ಮೇಲಿಂದ ಹಾರಿದ ಕಳ್ಳನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಾನಸಿ ನಗರದಲ್ಲಿಂದು (ಮೇ.೧೯) ನಡೆದಿದೆ.
ಬಾಲಾಜಿ ಎಂಬವರಿಗೆ ಕಣ್ಣಿನ ಸಮಸ್ಯೆಯಿದ್ದು, ಮರಗೆಲಸ ಮಾಡುವ ರವಿಗೆ ಎಂಬಾತನಿಗೆ ತಮ್ಮ ಮನೆಯಲ್ಲೇ ಆಶ್ರಯ ನೀಡಿದ್ದರು. ಈ ಹಿಂದೆಯೂ ಮನೆಯಲ್ಲಿ ರವಿ ಮೂರು ಬಾರಿ ಕಳುವಿಗೆ ಯತ್ನಿಸಿ ಸಿಕ್ಕಿಬಿದ್ದಾಗ ಬುದ್ದಿ ಹೇಳಿ ಖಡಕ್ ಸೂಚನೆ ನೀಡಿ ಸುಮ್ಮನಾಗಿದ್ದರು.
ಆದರೆ, ಅವರು ಮನೆಯಲ್ಲಿ ಇಲ್ಲದೆ ಇದ್ದಾಗ ಮತ್ತೆ ಮನೆಯ ನಕಲಿ ಬೀಗ ಬಳಸಿ ಕಳ್ಳತನ ಮಾಡಲು ಯತ್ನಸಿದ್ದಾನೆ. ಈ ಸಂದರ್ಭದಲ್ಲಿ ಮನೆಗೆ ಬಂದ ಮಾಲೀಕ ಡಾ. ಬಾಲಾಜಿ ಬೀಗ ತೆಗೆದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅದನ್ನು ಗಮನಿಸಿದ ಖದೀಮ ರವಿ ಮನೆಯ ಮಹಡಿ ಮೇಲಿಂದ ರಗ್ಗು ಕಟ್ಟಿ ಹಾರಲು ಯತ್ನಿಸಿ ನೆಲಕ್ಕುರುಳಿ ತಲೆಗೆ ತೀವ್ರತರವಾದ ಗಾಯವಾಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಮೈಸೂರು ಗ್ರಾಮಾಂತರ ಪೊಲೀಸರು ಕಳ್ಳನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…