ಮೈಸೂರು: ತನಗೆ ಆಶ್ರಯ ನೀಡಿದ್ದ ಮನೆಯಲ್ಲೇ ಕಳ್ಳತನ ಮಾಡಲು ಯತ್ನಿಸಿ ಸಿಕ್ಕಿ ಬೀಳುವ ಭಯದಲ್ಲಿ ಮಹಡಿ ಮೇಲಿಂದ ಹಾರಿದ ಕಳ್ಳನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಾನಸಿ ನಗರದಲ್ಲಿಂದು (ಮೇ.೧೯) ನಡೆದಿದೆ.
ಬಾಲಾಜಿ ಎಂಬವರಿಗೆ ಕಣ್ಣಿನ ಸಮಸ್ಯೆಯಿದ್ದು, ಮರಗೆಲಸ ಮಾಡುವ ರವಿಗೆ ಎಂಬಾತನಿಗೆ ತಮ್ಮ ಮನೆಯಲ್ಲೇ ಆಶ್ರಯ ನೀಡಿದ್ದರು. ಈ ಹಿಂದೆಯೂ ಮನೆಯಲ್ಲಿ ರವಿ ಮೂರು ಬಾರಿ ಕಳುವಿಗೆ ಯತ್ನಿಸಿ ಸಿಕ್ಕಿಬಿದ್ದಾಗ ಬುದ್ದಿ ಹೇಳಿ ಖಡಕ್ ಸೂಚನೆ ನೀಡಿ ಸುಮ್ಮನಾಗಿದ್ದರು.
ಆದರೆ, ಅವರು ಮನೆಯಲ್ಲಿ ಇಲ್ಲದೆ ಇದ್ದಾಗ ಮತ್ತೆ ಮನೆಯ ನಕಲಿ ಬೀಗ ಬಳಸಿ ಕಳ್ಳತನ ಮಾಡಲು ಯತ್ನಸಿದ್ದಾನೆ. ಈ ಸಂದರ್ಭದಲ್ಲಿ ಮನೆಗೆ ಬಂದ ಮಾಲೀಕ ಡಾ. ಬಾಲಾಜಿ ಬೀಗ ತೆಗೆದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅದನ್ನು ಗಮನಿಸಿದ ಖದೀಮ ರವಿ ಮನೆಯ ಮಹಡಿ ಮೇಲಿಂದ ರಗ್ಗು ಕಟ್ಟಿ ಹಾರಲು ಯತ್ನಿಸಿ ನೆಲಕ್ಕುರುಳಿ ತಲೆಗೆ ತೀವ್ರತರವಾದ ಗಾಯವಾಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಮೈಸೂರು ಗ್ರಾಮಾಂತರ ಪೊಲೀಸರು ಕಳ್ಳನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…
ಮಂಜು ಕೋಟೆ ಕೋಟೆ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಶುರು; ಮುಖಂಡರಿಂದ ಕಾರ್ಯತಂತ್ರ ಎಚ್.ಡಿ.ಕೋಟೆ: ತಾಲ್ಲೂಕಿನ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…