ಮೈಸೂರು: ತನಗೆ ಆಶ್ರಯ ನೀಡಿದ್ದ ಮನೆಯಲ್ಲೇ ಕಳ್ಳತನ ಮಾಡಲು ಯತ್ನಿಸಿ ಸಿಕ್ಕಿ ಬೀಳುವ ಭಯದಲ್ಲಿ ಮಹಡಿ ಮೇಲಿಂದ ಹಾರಿದ ಕಳ್ಳನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಾನಸಿ ನಗರದಲ್ಲಿಂದು (ಮೇ.೧೯) ನಡೆದಿದೆ.
ಬಾಲಾಜಿ ಎಂಬವರಿಗೆ ಕಣ್ಣಿನ ಸಮಸ್ಯೆಯಿದ್ದು, ಮರಗೆಲಸ ಮಾಡುವ ರವಿಗೆ ಎಂಬಾತನಿಗೆ ತಮ್ಮ ಮನೆಯಲ್ಲೇ ಆಶ್ರಯ ನೀಡಿದ್ದರು. ಈ ಹಿಂದೆಯೂ ಮನೆಯಲ್ಲಿ ರವಿ ಮೂರು ಬಾರಿ ಕಳುವಿಗೆ ಯತ್ನಿಸಿ ಸಿಕ್ಕಿಬಿದ್ದಾಗ ಬುದ್ದಿ ಹೇಳಿ ಖಡಕ್ ಸೂಚನೆ ನೀಡಿ ಸುಮ್ಮನಾಗಿದ್ದರು.
ಆದರೆ, ಅವರು ಮನೆಯಲ್ಲಿ ಇಲ್ಲದೆ ಇದ್ದಾಗ ಮತ್ತೆ ಮನೆಯ ನಕಲಿ ಬೀಗ ಬಳಸಿ ಕಳ್ಳತನ ಮಾಡಲು ಯತ್ನಸಿದ್ದಾನೆ. ಈ ಸಂದರ್ಭದಲ್ಲಿ ಮನೆಗೆ ಬಂದ ಮಾಲೀಕ ಡಾ. ಬಾಲಾಜಿ ಬೀಗ ತೆಗೆದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅದನ್ನು ಗಮನಿಸಿದ ಖದೀಮ ರವಿ ಮನೆಯ ಮಹಡಿ ಮೇಲಿಂದ ರಗ್ಗು ಕಟ್ಟಿ ಹಾರಲು ಯತ್ನಿಸಿ ನೆಲಕ್ಕುರುಳಿ ತಲೆಗೆ ತೀವ್ರತರವಾದ ಗಾಯವಾಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಮೈಸೂರು ಗ್ರಾಮಾಂತರ ಪೊಲೀಸರು ಕಳ್ಳನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…