ಮೈಸೂರು : ಜಮೀನಿನಲ್ಲಿ ಹತ್ತಿ ಬೆಳೆ ಬಿಡಿಸುತ್ತಿದ್ದ ವೇಳೆ ಹುಲಿ ರೈತನ ಮೇಲೆ ದಾಳಿ ನಡೆಸಿದ್ದು, ರೈತನಿಗೆ ಗಂಭೀರ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ.
ಬಡಗಲಪುರ ಗ್ರಾಮದ ರೈತ ಮಹದೇವಾ ಎಂಬ ವ್ಯಕ್ತಿಗೆ ಹುಲಿ ದಾಳಿ ನಡೆಸಿದೆ. ಗ್ರಾಮದ ಬಳಿ ಹುಲಿ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದ್ದು, ಜಮೀನಿನಲ್ಲಿ ಹತ್ತಿ ಬೆಳೆ ಬಿಡಿಸುತ್ತಿದ್ದ ಮಹದೇವನಿಗೆ ಹುಲಿ ದಾಳಿ ನಡೆಸಿದೆ ಎನ್ನಲಾಗಿದೆ. ರೈತನ ಮುಖದ ಮೇಲೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ:-ಮೈಸೂರುರಲ್ಲಿ ಸಾಲು ಸಾಲು ಕೊಲೆ, ಹದಗೆಟ್ಟ ಕಾನೂನು ಸುವ್ಯವಸ್ಥೆ : ಎಂಎಲ್ಸಿ ವಿಶ್ವನಾಥ್ ಆರೋಪ
ಗ್ರಾಮದಲ್ಲಿ ಎರಡು ತಿಂಗಳಿಂದ ನಿರಂತರವಾಗಿ ಹುಲಿ ಕಾಣಿಸಿಕೊಂಡು ಹಲವು ಜಾನುವಾರುಗಳ ಮೇಲೆ ದಾಳಿ ಮಾಡಿದೆ. ಹುಲಿ ಇರುವಿಕೆಯನ್ನು ಖಾತ್ರಿ ಮಾಡಿಕೊಂಡು ಇಂದು ಅರಣ್ಯ ಇಲಾಖೆ ಸಿಬ್ಬಂದಿಗಳು ಸಾಕಾನೆಗಳ ಮೂಲಕ ಕೊಂಬಿಂಗ್ ಕಾರ್ಯಚರಣೆ ನಡೆಸುತ್ತಿದ್ದರು. ಕೊಂಬಿಂಗ್ ನಡೆಸುತ್ತಿದ್ದ ಅಣತಿ ದೂರದಲ್ಲೇ ಹುಲಿ ದಾಳಿ ನಡೆಸಿದೆ. ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳ ವಾಹನಕ್ಕೆ ಕಲ್ಲು ತೂರಾಟ ಮಾಡಿ ಜಖಂಗೊಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…
ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…
ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…