ಮೈಸೂರು

ಮೈಸೂರು | ರೈತನ ಮೇಲೆ ಹುಲಿ ದಾಳಿ, ಸ್ಥಿತಿ ಗಂಭೀರ

ಮೈಸೂರು : ಜಮೀನಿನಲ್ಲಿ ಹತ್ತಿ ಬೆಳೆ ಬಿಡಿಸುತ್ತಿದ್ದ ವೇಳೆ ಹುಲಿ ರೈತನ ಮೇಲೆ ದಾಳಿ ನಡೆಸಿದ್ದು, ರೈತನಿಗೆ ಗಂಭೀರ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ.

ಬಡಗಲಪುರ ಗ್ರಾಮದ ರೈತ ಮಹದೇವಾ ಎಂಬ ವ್ಯಕ್ತಿಗೆ ಹುಲಿ ದಾಳಿ ನಡೆಸಿದೆ. ಗ್ರಾಮದ ಬಳಿ ಹುಲಿ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದ್ದು, ಜಮೀನಿನಲ್ಲಿ ಹತ್ತಿ ಬೆಳೆ ಬಿಡಿಸುತ್ತಿದ್ದ ಮಹದೇವನಿಗೆ ಹುಲಿ ದಾಳಿ ನಡೆಸಿದೆ ಎನ್ನಲಾಗಿದೆ. ರೈತನ ಮುಖದ ಮೇಲೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ:-ಮೈಸೂರುರಲ್ಲಿ ಸಾಲು ಸಾಲು ಕೊಲೆ, ಹದಗೆಟ್ಟ ಕಾನೂನು ಸುವ್ಯವಸ್ಥೆ : ಎಂಎಲ್‌ಸಿ ವಿಶ್ವನಾಥ್‌ ಆರೋಪ

ಗ್ರಾಮದಲ್ಲಿ ಎರಡು ತಿಂಗಳಿಂದ ನಿರಂತರವಾಗಿ ಹುಲಿ ಕಾಣಿಸಿಕೊಂಡು ಹಲವು ಜಾನುವಾರುಗಳ ಮೇಲೆ ದಾಳಿ ಮಾಡಿದೆ. ಹುಲಿ ಇರುವಿಕೆಯನ್ನು ಖಾತ್ರಿ ಮಾಡಿಕೊಂಡು ಇಂದು ಅರಣ್ಯ ಇಲಾಖೆ ಸಿಬ್ಬಂದಿಗಳು ಸಾಕಾನೆಗಳ ಮೂಲಕ ಕೊಂಬಿಂಗ್ ಕಾರ್ಯಚರಣೆ ನಡೆಸುತ್ತಿದ್ದರು. ಕೊಂಬಿಂಗ್ ನಡೆಸುತ್ತಿದ್ದ ಅಣತಿ ದೂರದಲ್ಲೇ ಹುಲಿ ದಾಳಿ ನಡೆಸಿದೆ. ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳ ವಾಹನಕ್ಕೆ ಕಲ್ಲು ತೂರಾಟ ಮಾಡಿ ಜಖಂಗೊಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

10 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

10 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

10 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

10 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

10 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

11 hours ago