ಮೈಸೂರು : ಜಮೀನಿನಲ್ಲಿ ಹತ್ತಿ ಬೆಳೆ ಬಿಡಿಸುತ್ತಿದ್ದ ವೇಳೆ ಹುಲಿ ರೈತನ ಮೇಲೆ ದಾಳಿ ನಡೆಸಿದ್ದು, ರೈತನಿಗೆ ಗಂಭೀರ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ.
ಬಡಗಲಪುರ ಗ್ರಾಮದ ರೈತ ಮಹದೇವಾ ಎಂಬ ವ್ಯಕ್ತಿಗೆ ಹುಲಿ ದಾಳಿ ನಡೆಸಿದೆ. ಗ್ರಾಮದ ಬಳಿ ಹುಲಿ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದ್ದು, ಜಮೀನಿನಲ್ಲಿ ಹತ್ತಿ ಬೆಳೆ ಬಿಡಿಸುತ್ತಿದ್ದ ಮಹದೇವನಿಗೆ ಹುಲಿ ದಾಳಿ ನಡೆಸಿದೆ ಎನ್ನಲಾಗಿದೆ. ರೈತನ ಮುಖದ ಮೇಲೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ:-ಮೈಸೂರುರಲ್ಲಿ ಸಾಲು ಸಾಲು ಕೊಲೆ, ಹದಗೆಟ್ಟ ಕಾನೂನು ಸುವ್ಯವಸ್ಥೆ : ಎಂಎಲ್ಸಿ ವಿಶ್ವನಾಥ್ ಆರೋಪ
ಗ್ರಾಮದಲ್ಲಿ ಎರಡು ತಿಂಗಳಿಂದ ನಿರಂತರವಾಗಿ ಹುಲಿ ಕಾಣಿಸಿಕೊಂಡು ಹಲವು ಜಾನುವಾರುಗಳ ಮೇಲೆ ದಾಳಿ ಮಾಡಿದೆ. ಹುಲಿ ಇರುವಿಕೆಯನ್ನು ಖಾತ್ರಿ ಮಾಡಿಕೊಂಡು ಇಂದು ಅರಣ್ಯ ಇಲಾಖೆ ಸಿಬ್ಬಂದಿಗಳು ಸಾಕಾನೆಗಳ ಮೂಲಕ ಕೊಂಬಿಂಗ್ ಕಾರ್ಯಚರಣೆ ನಡೆಸುತ್ತಿದ್ದರು. ಕೊಂಬಿಂಗ್ ನಡೆಸುತ್ತಿದ್ದ ಅಣತಿ ದೂರದಲ್ಲೇ ಹುಲಿ ದಾಳಿ ನಡೆಸಿದೆ. ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳ ವಾಹನಕ್ಕೆ ಕಲ್ಲು ತೂರಾಟ ಮಾಡಿ ಜಖಂಗೊಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…