mysuru heavy rain
ಮೈಸೂರು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿವೆ.
ಮೈಸೂರಿನ ಬೃಂದಾವನ ಬಡಾವಣೆಯ ಪ್ರಿಯದರ್ಶಿನಿ ಆಸ್ಪತ್ರೆ ಬಳಿಯಿರುವ ಮನೆಯೊಂದರ ಮೇಲೆ ಮರ ಹಾಗೂ ವಿದ್ಯುತ್ ಕಂಬ ಉರುಳಿಬಿದ್ದಿದ್ದು, ವಿದ್ಯುತ್ ತಂತಿ ಮನೆ ಮೇಲೆ ಸುರುಳಿ ಸುತ್ತಿಕೊಂಡು ಬಿದ್ದಿದೆ. ಆ ಸಮಯದಲ್ಲಿ ವಿದ್ಯುತ್ ಸಂಪರ್ಕ ಕಡಿತವಾದ್ದರಿಂದ ಮುಂದೆ ಆಗಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ:- ನಂಜನಗೂಡಿನಲ್ಲಿ ಸುರಿದ ಧಾರಾಕಾರ ಮಳೆ: ಧರೆಗುರುಳಿದ ಬೃಹತ್ ಗಾತ್ರದ ಮರಗಳು
ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಮನೆ ಮಾಲೀಕರು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮರವನ್ನು ತೆರವುಗೊಳಿಸುವಂತೆ ಪಾಲಿಕೆಗೆ ಪದೇ ಪದೇ ಮನವಿ ಮಾಡಿದ್ದರೂ ಏನೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:- ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ
ವಿಷಯ ತಿಳಿದು ಸ್ಥಳಕ್ಕಾಗಮಿಸಿ ನಗರ ಪಾಲಿಕೆ ಮಾಜಿ ಸದಸ್ಯ ಎಸ್ಬಿಎಂ ಮಂಜು ಅವರು ಪರಿಶೀಲನೆ ನಡೆಸಿದ್ದು, ಪಾಲಿಕೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿ ಮರ ತೆರವುಗೊಳಿಸುತ್ತೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…
ಚಿತ್ತಾಪುರ: ಕಾಂಗ್ರೆಸ್ ಸರ್ಕಾರ ರೈತರ ಅಭ್ಯುದಯಕ್ಕೆ ಶ್ರಮಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನುಡಿದರು.…
ಪಾಟ್ನಾ: ಮುಂದಿನ ವಾರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ಆಯ್ಕೆಯಾಗುವ ಸಾಧ್ಯತೆ ಇದ್ದು, ನಾಳೆ ನಿತೀಶ್ ಕುಮಾರ್ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣವಚನ…
ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಸಂಜೆ 4.30ರ ವೇಳೆಗೆ ಬಾಗಲಕೋಟೆಯಲ್ಲಿ ಶೇ.54.82 ಹಾಗೂ ದಾವಣಗೆರೆ…