ಮೈಸೂರು

ಮೈಸೂರು| ಮನೆ ಮೇಲೆ ಉರುಳಿದ ಮರ, ವಿದ್ಯುತ್‌ ಕಂಬ: ತಪ್ಪಿದ ಭಾರೀ ಅನಾಹುತ

ಮೈಸೂರು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಯೊಂದರ ಮೇಲೆ ವಿದ್ಯುತ್‌ ಕಂಬ ಹಾಗೂ ಮರ ಉರುಳಿಬಿದ್ದಿವೆ.

ಮೈಸೂರಿನ ಬೃಂದಾವನ ಬಡಾವಣೆಯ ಪ್ರಿಯದರ್ಶಿನಿ ಆಸ್ಪತ್ರೆ ಬಳಿಯಿರುವ ಮನೆಯೊಂದರ ಮೇಲೆ ಮರ ಹಾಗೂ ವಿದ್ಯುತ್‌ ಕಂಬ ಉರುಳಿಬಿದ್ದಿದ್ದು, ವಿದ್ಯುತ್‌ ತಂತಿ ಮನೆ ಮೇಲೆ ಸುರುಳಿ ಸುತ್ತಿಕೊಂಡು ಬಿದ್ದಿದೆ. ಆ ಸಮಯದಲ್ಲಿ ವಿದ್ಯುತ್‌ ಸಂಪರ್ಕ ಕಡಿತವಾದ್ದರಿಂದ ಮುಂದೆ ಆಗಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇದನ್ನೂ ಓದಿ:- ನಂಜನಗೂಡಿನಲ್ಲಿ ಸುರಿದ ಧಾರಾಕಾರ ಮಳೆ: ಧರೆಗುರುಳಿದ ಬೃಹತ್‌ ಗಾತ್ರದ ಮರಗಳು 

ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಮನೆ ಮಾಲೀಕರು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮರವನ್ನು ತೆರವುಗೊಳಿಸುವಂತೆ ಪಾಲಿಕೆಗೆ ಪದೇ ಪದೇ ಮನವಿ ಮಾಡಿದ್ದರೂ ಏನೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:- ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ

ವಿಷಯ ತಿಳಿದು ಸ್ಥಳಕ್ಕಾಗಮಿಸಿ ನಗರ ಪಾಲಿಕೆ ಮಾಜಿ ಸದಸ್ಯ ಎಸ್‌ಬಿಎಂ ಮಂಜು ಅವರು ಪರಿಶೀಲನೆ ನಡೆಸಿದ್ದು, ಪಾಲಿಕೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿ ಮರ ತೆರವುಗೊಳಿಸುತ್ತೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

6 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

6 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

6 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

6 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

18 hours ago