ಮೈಸೂರು

ಮೈಸೂರು| ಮನೆ ಮೇಲೆ ಉರುಳಿದ ಮರ, ವಿದ್ಯುತ್‌ ಕಂಬ: ತಪ್ಪಿದ ಭಾರೀ ಅನಾಹುತ

ಮೈಸೂರು: ಕಳೆದ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಯೊಂದರ ಮೇಲೆ ವಿದ್ಯುತ್‌ ಕಂಬ ಹಾಗೂ ಮರ ಉರುಳಿಬಿದ್ದಿವೆ.

ಮೈಸೂರಿನ ಬೃಂದಾವನ ಬಡಾವಣೆಯ ಪ್ರಿಯದರ್ಶಿನಿ ಆಸ್ಪತ್ರೆ ಬಳಿಯಿರುವ ಮನೆಯೊಂದರ ಮೇಲೆ ಮರ ಹಾಗೂ ವಿದ್ಯುತ್‌ ಕಂಬ ಉರುಳಿಬಿದ್ದಿದ್ದು, ವಿದ್ಯುತ್‌ ತಂತಿ ಮನೆ ಮೇಲೆ ಸುರುಳಿ ಸುತ್ತಿಕೊಂಡು ಬಿದ್ದಿದೆ. ಆ ಸಮಯದಲ್ಲಿ ವಿದ್ಯುತ್‌ ಸಂಪರ್ಕ ಕಡಿತವಾದ್ದರಿಂದ ಮುಂದೆ ಆಗಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇದನ್ನೂ ಓದಿ:- ನಂಜನಗೂಡಿನಲ್ಲಿ ಸುರಿದ ಧಾರಾಕಾರ ಮಳೆ: ಧರೆಗುರುಳಿದ ಬೃಹತ್‌ ಗಾತ್ರದ ಮರಗಳು 

ಘಟನೆ ನಡೆಯುತ್ತಿದ್ದಂತೆ ರೊಚ್ಚಿಗೆದ್ದ ಮನೆ ಮಾಲೀಕರು ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮರವನ್ನು ತೆರವುಗೊಳಿಸುವಂತೆ ಪಾಲಿಕೆಗೆ ಪದೇ ಪದೇ ಮನವಿ ಮಾಡಿದ್ದರೂ ಏನೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ನಮಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:- ಕೊಡಗಿನಲ್ಲಿ ರಾತ್ರಿ ಸುರಿದ ಮಳೆಗೆ ಭಾರೀ ಅವಾಂತರ

ವಿಷಯ ತಿಳಿದು ಸ್ಥಳಕ್ಕಾಗಮಿಸಿ ನಗರ ಪಾಲಿಕೆ ಮಾಜಿ ಸದಸ್ಯ ಎಸ್‌ಬಿಎಂ ಮಂಜು ಅವರು ಪರಿಶೀಲನೆ ನಡೆಸಿದ್ದು, ಪಾಲಿಕೆ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿ ಮರ ತೆರವುಗೊಳಿಸುತ್ತೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

4 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

6 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

7 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

9 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

10 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

11 hours ago