ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್.ಡಿ ನಡೆಸಲು ಸಂಶೋಧನಾ ಮಾರ್ಗದರ್ಶಕರ ಕೊರತೆ ಇರುವುದನ್ನು ನೀಗಿಸಿ ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘ ಮತ್ತು ಪಿಎಚ್.ಡಿ ಆಕಾಂಕ್ಷಿಗಳು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ನಗರದ ಕಾಫ್ರಡ್ ಭವನ ಮುಂಭಾಗ ಮಂಗಳವಾರ ಬೆಳಗಿನಿಂದಲೇ ಆರಂಭವಾದ ಪ್ರತಿಭಟನೆಗೆ ಸಂಶೋಧನ ವಿದ್ಯಾರ್ಥಿಗಳು, ಪಿಎಚ್.ಡಿ ಆಕಾಂಕ್ಷಿಗಳು ಜಮಾವಣೆಗೊಂಡ ವಿವಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ವಿವಿಯಲ್ಲಿ ಪಿಎಚ್.ಡಿ ಮಾರ್ಗದರ್ಶಕ ಕೊರತೆ ಹೇರಳವಾಗಿದೆ. ಇದರಿಂದ ಹೊಸದಾಗಿ ಪಿಎಚ್.ಡಿ. ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ತೊಡಕಾಗಿ ವಿದ್ಯಾರ್ಥಿಗಳ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ದೂರಿದರು.
ಪ್ರಾಧ್ಯಾಪಕರ ಕೊರತೆ ;
ಪಿಎಚ್.ಡಿ., ಕೆ-ಸೆಟ್, ನೆಟ್, ಜೆಆರ್ಎಫ್ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ವಿವಿಯಲ್ಲಿ ಪಿಎಚ್.ಡಿ. ಅಧ್ಯಯನಕ್ಕೆ ಅವಕಾಶ ಇಲ್ಲದಂತಾಗಿದೆ. ಆದ್ದರಿಂದ ಈಗಿರುವ ಖಾಯಂ ಪ್ರಾಧ್ಯಾಪಕರ ಬಳಿಯೇ ಮಾರ್ಗದರ್ಶನ ಪಡೆಯಲು ಅವಕಾಶ ಕೊಡಬೇಕು. ಪಿಎಚ್.ಡಿ. ಅಭ್ಯರ್ಥಿಗಳ ಹಿತದೃಷ್ಟಿಯಿಂದ ಮಾರ್ಗದರ್ಶಕರಿಗೆ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯೆಯ ಮಿತಿಯನ್ನು ಹೆಚ್ಚಿಸಬೇಕು ಎಂದು ಪ್ರತಿಭಟನಾಕರರು ಆಗ್ರಹಿಸಿದರು.
ಸಂಶೋಧನಾ ಆಕಾಂಕ್ಷಿಗಳ ಬೇಡಿಕೆಗಳು ;
ಪಿಎಚ್.ಡಿ. ಮಾರ್ಗದರ್ಶನಕ್ಕೆ ಹೆಚ್ಚುವರಿ ದಾಖಲಾತಿ ಕೊಡಬೇಕು. ವಿಶ್ವವಿದ್ಯಾನಿಲಯದ ಎಲ್ಲಾ ವಿಭಾಗಗಳಲ್ಲೂ ಪಿಎಚ್.ಡಿ. ಮಾರ್ಗದರ್ಶಕರ ಕೊರತೆ ಇದೆ. ಹಾಗಾಗಿ ಕೇಂದ್ರದ ಯುಜಿಸಿ ಮಾರ್ಗಸೂಚಿಯ ಪ್ರಕಾರ ಇತರೆ ವಿವಿಗಳ ಸಾಮಾಜಿಕ ಅಧ್ಯಯನ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರುಗಳಿಗೆ ಹೆಚ್ಚುವರಿ ಅವಕಾಶ ನೀಡಿದ್ದು, ಇಲ್ಲಿಯೂ ಆ ಮಾದರಿಯನ್ನು ಅನುಸರಿಸಬೇಕು ಎಂದು ಒತ್ತಾಯಿಸಿದರು.
ಇದರಿಂದ ವಿವಿಗೆ ಯಾವುದೇ ಆರ್ಥಿಕ ಹೊಣೆಗಾರಿಕೆ ಇರುವುದಿಲ್ಲ. ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಇತರೆ ಸಹ ಪ್ರಾಧ್ಯಾಪಕರಿಗೂ ಪಿಎಚ್.ಡಿ.ಗೆ ಮಾರ್ಗದರ್ಶನ ನೀಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಮಳೆಯನ್ನು ಲೆಕ್ಕಸದೇ ಧರಣಿ;
ಮಂಗಳವಾರ ಬೆಳಿಗ್ಗೆ 11ರ ವೇಳೆಯಿಂದ ಆರಂಭವಾದ ಪ್ರತಿಭಟನೆಗೆ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸದ ಕಾರಣ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಚೋರನಹಳ್ಳಿ ಶಿವಣ್ಣ ಅವರ ನೇತೃತ್ವದಲ್ಲಿ ಆಹೋರಾತ್ರಿ ಧರಣಿ ನಡೆಯುತ್ತಿದೆ. ಮಳೆಯನ್ನು ಲೆಕ್ಕಸದೇ ಹೋರಾಟಗಾರರು ಧರಣಿ ಮುಂದುವರಿಸಿದ್ದಾರೆ.
ಮಾಜಿ ಮಹಾಪೌರ ಪುರುಷೋತ್ತಮ್, ಸಂಶೋಧಕರ ಸಂಘದ ಅಧ್ಯಕ್ಷ ಶಿವಶಂಕರ್, ವಿಶ್ವ ಪ್ರಸಾದ್, ಉಪಾಧ್ಯಕ್ಷ ಪಿ.ಮರಹಳ್ಳಿ, ಪ್ರದೀಪ್, ಮಹೇಶ್, ರೋಹನ್, ರೋಜಾ ಸೇರಿದಂತೆ ಸಂಶೋಧನಾ ಆಕಾಂಕ್ಷಿಗಳು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…