ಮೈಸೂರು: ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ವಿವಿಯ ಕ್ರಾಫರ್ಡ್ ಹಾಲ್ ಮುಂಭಾಗ ಜಮಾವಣೆಗೊಂಡ ಸಂಶೋಧಕರು ವಿಶ್ವವಿದ್ಯಾನಿಲಯದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಬಳಿಕ ಮಾತನಾಡಿದ ಸಂಶೋಧಕ ಸಂಘದ ಅಧ್ಯಕ್ಷ ಶಿವಶಂಕರ್, ವಿಶ್ವವಿದ್ಯಾನಿಲಯವು ಕಳೆದ 6-7 ವರ್ಷಗಳಿಂದ ಎಸ್ಸಿ/ಎಸ್ಟಿ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹೆಚ್ಚಳ ಮಾಡಿಲ್ಲ. ಈ ಬಗ್ಗೆ ಕುಲಪತಿಗಳ ಗಮನಕ್ಕೆ ತಂದಿದ್ದೇವೆ. ಆದರೆ, ಈವರೆಗೂ ಕುಲಪತಿಗಳು ಶಿಷ್ಯ ವೇತನ ಹೆಚ್ಚಳಕ್ಕೆ ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮನೆಬಾಡಿಗೆ ವೆಚ್ಚ, ಸಂಶೋಧನಾ ಲೇಖನಗಳ ವೆಚ್ಚದ ಹೆಚ್ಚಳ, ವಾರ್ಷಿಕ ಹಾಗೂ ಇತರ ಶುಲ್ಕಗಳ ಹೆಚ್ಚಳ, ಸಂಶೋಧನಾ ಬಳಕೆ ಪರಿಕರಗಳ ಹೆಚ್ಚಳ ಇತ್ಯಾದಿ ಈ ಎಲ್ಲ ಬೆಲೆ ಹೆಚ್ಚಳದಿಂದಾಗಿ ಸಂಶೋಧನಾ ಕಾರ್ಯ ನಡೆಸಲು ಸಾಧ್ಯವಾಗದ ಕಾರಣ ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದಿರುವ ಸಂಶೋಧಕರಿಗೆ ಇದರಿಂದ ಹೊರೆಯಾಗುತ್ತಿದೆ. ಈ ಕಾರಣ ಪ್ರಸ್ತುತ ನೀಡುತ್ತಿರುವ ಶಿಷ್ಯವೇತನ ಜೊತೆಯಲ್ಲಿ 10,000 ಸಾವಿರ ಶಿಷ್ಯವೇತನ ಹೆಚ್ಚಳ ಮಾಡುವವರೆಗೂ ಪ್ರತಿಭಟನೆ ಮುಂದುರೆಯುತ್ತದೆ. ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಗೌರವಾಧ್ಯಕ್ಷ ಮಹೇಶ್ ಸಿ, ಪ್ರಧಾನ ಕಾರ್ಯದರ್ಶಿ ಕುಶಾಲ್ ಸೇರಿದಂತೆ ಸಂಶೋಧನಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್ಗಳಿಗೆ…
ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್…
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…