ಮೈಸೂರು

ವಿದ್ಯಾರ್ಥಿಗಳು ಹೊಸ ಹೊಸ ವಿಷಯಗಳ ಕಡೆ ಗಮನಹರಿಸಿ : ಕುಲಪತಿ ಲೋಕನಾಥ್‌ ಸಲಹೆ

ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹೇಳಿದರು.

ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ರಾಷ್ಟ್ರೀಯ ಉಚ್ಛತ್ತರ್ ಶಿಕ್ಷಣ ಅಭಿಯಾನ ಪ್ರಾಯೋಜಕತ್ವದಲ್ಲಿ ಮೈಸೂರು ವಿ.ವಿ ವತಿಯಿಂದ ಬುಧವಾರ ಡಿಜಿಟಲ್ ಲರ್ನಿಂಗ್ ಅಂಡ್ ಮಾನಿಟರಿಂಗ್ ಸೆಲ್ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪುನಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನೀವು ಕಲಿಯುವ ವಿಷಯದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಯತ್ತ ಕೂಡ ಆಸಕ್ತಿವಹಿಸದೆ ನೇರವಾಗಿ ಪರೀಕ್ಷೆ ಎದುರಿಸಿದರೆ ಅದು ಕಷ್ಟಕರವಾಗುತ್ತದೆ. ಜಗತ್ತು ಬದಲಾಗುವುದರ ಜೊತೆಗೆ ನಾವು ಕೂಡ ಬದಲಾಗಬೇಕೆಂದರೆ ಹೊಸ ಹೊಸ ವಿಷಯಗಳ ಕಡೆ ಗಮನಹರಿಸಬೇಕು ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲಾ ಒಂದು ವಿಶೇಷ ಪ್ರತಿಭೆ ಇರುತ್ತದೆ. ಅಂತಹ ಪ್ರತಿಭೆಗಳನ್ನು ಗುರುತಿಸಿಕೊಳ್ಳಲು ಇಂತಹ ಪುನಶ್ಚೇತನ ಕಾರ್ಯಾಗಾರಗಳು ಒಳ್ಳೆಯ ವೇದಿಕೆಯಾಗಿವೆ. ಪಠ್ಯಪುಸ್ತಕದ ಚಟುವಟಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಕೂಡ ಶಿಸ್ತಿನಿಂದ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಪದವಿ ಎಂಬುದು ವಿದ್ಯಾರ್ಥಿಗಳಿಗೆ ತುಂಬಾ ಮುಖ್ಯವಾಗಿದ್ದು, ಈ ಹಂತ ನಿಮ್ಮ ಜೀವನದ ಉಜ್ವಲ ಭವಿಷ್ಯವನ್ನು ರೂಪಿಸುತ್ತದೆ. ಉದ್ಯಮಗಳ ಅವಶ್ಯಕತೆಗಳಿಗೆ ಅನುಗುಣವಾಗಿ ಶೈಕ್ಷಣಿಕ ಕಾರ್ಯಕ್ರಮ ರೂಪಿಸಿ, ಸೂಕ್ತ ಮಾರ್ಗದರ್ಶನ ಮತ್ತು ತರಬೇತಿ ಒದಗಿಸುವ ಮೂಲಕ ಇಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಬೆಂಬಲ ಒದಗಿಸಬಹುದು ಎಂದು ಅಭಿಪ್ರಾಯಪಟ್ಟರು

ಮೊಬೈಲ್‌ ಅನ್ನು ಅವಶ್ಯವಿದ್ದಷ್ಟೇ ಬಳಸಿ ಪ್ರತಿ ದಿನ, ಪ್ರತಿ ಕ್ಷಣ ಹೊಸ ಹೊಸ ವಿಷಯಗಳತ್ತ ಗಮನಹರಿಸಬೇಕಿದೆ.ನೀವು ಕಲಿಯುವ ವಿಷಯ ಯಾವುದೇ ಇರಲಿ ಆದರೆ ನೀವು ಆಯ್ಕೆ ಮಾಡಿಕೊಳ್ಳುವ ವಿಷಯದಿಂದ ನಮ್ಮ ಮುಂದಿನ ಭವಿಷ್ಯಕ್ಕೆ ಅನುಕೂಲವಾಗಲಿದೆ ಎಂಬುದನ್ನು ಅರಿಯಬೇಕು ಎಂದು ಹೇಳಿದರು.

ಮೈಸೂರು ವಿ.ವಿ ಪರೀಕ್ಷಾಂಗ ಕುಲಸಚಿವ ಎನ್.ನಾಗರಾಜು ಮಾತನಾಡಿ, ಸಾಮಾಜಿಕ ಜವಾಬ್ದಾರಿ ಎಂಬುದು ಪ್ರತಿಯೊಬ್ಬರಿಗೂ ಮುಖ್ಯವಾಗಿರುತ್ತದೆ. ಅದನ್ನು ಅರ್ಥೈಸಿ ಕೊಂಡರೆ ಮಾತ್ರ ನಿಮ್ಮ ಮುಂದಿನ ಜೀವನವನ್ನು ಸುಂದರ ಹಾಗೂ ಸರಳಗೊಳಿಸಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಸ್ವಯಂ ಕೋರ್ಸ್‌ನ ಮುಖ್ಯಕಾರ್ಯನಿರ್ವಹಕಾಧಿಕಾರಿ ಡಾ.ಕುಮಾರನ್, ಪ್ರೊ.ಎಂ.ಎಸ್.ಸಪ್ನಾ ಮತ್ತಿತರರು ಹಾಜರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

8 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

13 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

13 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

13 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

18 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

18 hours ago